ಎಚ್.ಡಿ.ದೇವೇಗೌಡರು ಪ್ರಧಾನಿಯಾಗಲು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಕಾರಣ. ಆದರೆ, ಜೆಡಿಎಸ್ ನಾಯಕರು ಕನಿಷ್ಠ ಸೌಜನ್ಯಕ್ಕೂ ಧನ್ಯವಾದ ಹೇಳಿಲ್ಲ. ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಸ್ಥಾನ ಉಳಿಸಲು ಡಿ.ಕೆ.ಶಿವಕುಮಾರ್ ಅವರು ಮುಂಬೈವರೆಗೂ ಹೋಗಿ ಹೋರಾಡಿದ್ದರು. ಆದರೆ, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ನವರ ಸ್ಥಿತಿ ಏನಾಗಿದೆ? ಬಿಜೆಪಿ ಮಂದೆ ಅವರ ಆಟಗಳು ನಡೆಯುತ್ತಿಲ್ಲ, ಗೌರವವೂ ಇಲ್ಲವಾಗಿದೆ. ಇಲ್ಲಿಯವರೆಗೂ ಮಂಡ್ಯ, ಹಾಸನ ಅಭ್ಯರ್ಥಿ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಕೇವಲ ಎರಡು ಸೀಟಿಗಾಗಿ ಮೈತ್ರಿ ಬೇಕಿತ್ತಾ ಎಂದು ಕುಮಾರಸ್ವಾಮಿಯವರೇ ಹೇಳಿದ್ದಾರೆ
ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಎರಡು ಕ್ಷೇತ್ರ ಪಡೆಯಲು ತಿಣುಕಾಡುತ್ತಿದೆ. ಕುಮಾರಸ್ವಾಮಿ ಅವರು ಯಾವುದೇ ಪಕ್ಷದ ಜೊತೆ ಹೋದರೂ ಅಸಮಾಧಾನ ಹೊರ ಹಾಕುತ್ತಾರೆ. ಕಡೆಗೆ ಬೈದುಕೊಂಡು ಆಚೆ ಬರುತ್ತಾರೆ. ಇನ್ನೊಂದು ತಿಂಗಳಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಹೇಗೆ ಬೈಯುತ್ತಾರೆಂದು ಕಾದು ನೋಡಿ