<p>ರಾಂಪುರ: ‘ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ರಾಜ್ಯದ ಜನರಿಗೆ ನಂಬಿಕೆ ಹಾಗೂ ವಿಶ್ವಾಸ ದ್ರೋಹ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನ ಬೇಸತ್ತಿದ್ದು, ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಲಿದ್ದಾರೆ’ ಎಂದರು.</p>.<p>‘ನಮ್ಮ ಆಡಳಿತದ ಅವಧಿಯಲ್ಲಿ ಜಾರಿಗೊಳಿಸಿದ್ದ ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಪ್ರತಿವರ್ಷ ₹4 ಸಾವಿರ ಸಹಾಯಧನ ನೀಡುವುದು ಸೇರಿ ಹಲವು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಕಾಂಗ್ರೆಸ್ ಪಕ್ಷ ಇನ್ನೊಮ್ಮೆ ಚುನಾವಣೆಗೆ ನಿಲ್ಲುವ ಧೈರ್ಯ ಮಾಡದ ರೀತಿಯಲ್ಲಿ ಪಾಠ ಕಲಿಸಬೇಕು. ಆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು 10 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಯುವಕರಿಗೆ ನೀಡಬೇಕಾದ ಸಹಾಯಧನ ಸೇರಿದಂತೆ ಹಲವಾರು ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಆರೋಪಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಜನರಿಗೆ ನಿಜವಾದ ಪ್ರಯೋಜನ ತಂದಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ. ರಾಜ್ಯ ಸರ್ಕಾರದಿಂದ ನಿರುದ್ಯೋಗ ಸಮಸ್ಯೆಗೆ ಸಮರ್ಪಕ ಪರಿಹಾರ ದೊರಕಿಲ್ಲ’ ಎಂದು ಟೀಕಿಸಿದರು.</p>.<p>ಸಂಸದರಾದ ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಸಿ.ಪಾಟೀಲ, ರಮೇಶ ಕತ್ತಿ, ಎ.ಎಸ್.ಪಾಟೀಲ ನಡಹಳ್ಳಿ ಸೇರಿದಂತೆ ಹಲವು ನಾಯಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1860963005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ‘ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ರಾಜ್ಯದ ಜನರಿಗೆ ನಂಬಿಕೆ ಹಾಗೂ ವಿಶ್ವಾಸ ದ್ರೋಹ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನ ಬೇಸತ್ತಿದ್ದು, ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಲಿದ್ದಾರೆ’ ಎಂದರು.</p>.<p>‘ನಮ್ಮ ಆಡಳಿತದ ಅವಧಿಯಲ್ಲಿ ಜಾರಿಗೊಳಿಸಿದ್ದ ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಪ್ರತಿವರ್ಷ ₹4 ಸಾವಿರ ಸಹಾಯಧನ ನೀಡುವುದು ಸೇರಿ ಹಲವು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ. ಕಾಂಗ್ರೆಸ್ ಪಕ್ಷ ಇನ್ನೊಮ್ಮೆ ಚುನಾವಣೆಗೆ ನಿಲ್ಲುವ ಧೈರ್ಯ ಮಾಡದ ರೀತಿಯಲ್ಲಿ ಪಾಠ ಕಲಿಸಬೇಕು. ಆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು 10 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಯುವಕರಿಗೆ ನೀಡಬೇಕಾದ ಸಹಾಯಧನ ಸೇರಿದಂತೆ ಹಲವಾರು ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಆರೋಪಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಜನರಿಗೆ ನಿಜವಾದ ಪ್ರಯೋಜನ ತಂದಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ. ರಾಜ್ಯ ಸರ್ಕಾರದಿಂದ ನಿರುದ್ಯೋಗ ಸಮಸ್ಯೆಗೆ ಸಮರ್ಪಕ ಪರಿಹಾರ ದೊರಕಿಲ್ಲ’ ಎಂದು ಟೀಕಿಸಿದರು.</p>.<p>ಸಂಸದರಾದ ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಸಿ.ಪಾಟೀಲ, ರಮೇಶ ಕತ್ತಿ, ಎ.ಎಸ್.ಪಾಟೀಲ ನಡಹಳ್ಳಿ ಸೇರಿದಂತೆ ಹಲವು ನಾಯಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1860963005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>