<p>ಕಮತಗಿ(ಅಮೀನಗಡ): ‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಬಹುದೊಡ್ಡ ಚರ್ಚೆಯಾಗಿದ್ದು, ಇದನ್ನು ಗಮನಿಸಿದ ರಾಜ್ಯದ ಜನತೆ ಬೇಸತ್ತಿದ್ದಾರೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಉಪ ಚುನಾವಣೆಯಲ್ಲಿ ಬೀಡು ಬಿಟ್ಟಿರುವ ಇಡೀ ಸರ್ಕಾರ ರೈತರು, ನೇಕಾರರ ಸಮಸ್ಯೆಗಳನ್ನು ಅರಿಯುವ ಕೆಲಸ ಮಾಡುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ನಿಮ್ಮದು ಕುಟುಂಬ ರಾಜಕಾರಣವಲ್ಲವಾ? ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ತಮ್ಮ ಮಗನನ್ನು ರಾಜಕಾರಣಕ್ಕೆ ತಂದಿದ್ದು ಕುಟುಂಬ ರಾಜಕಾರಣವಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಈ ಹಿಂದೆ ಜಿಲ್ಲೆಯ ಬಾದಾಮಿಯಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ರಾಜಕೀಯ ಪುನರ್ಜನ್ಮ ಪಡೆದರು. ಆದರೆ ಕೈ ಹಿಡಿದ ಕ್ಷೇತ್ರವನ್ನು ಅಭಿವೃದ್ಧಿ ಮಾಡದಿರುವುದು ದುರ್ದೈವ’ ಎಂದರು.</p>.<p>‘ಈ ಭಾಗದ ಹೆಚ್ಚಿನ ಸಂಖ್ಯೆಯಲ್ಲಿರುವ ನೇಕಾರರ ಮನವಿಗೆ ಸ್ಪಂದಿಸಿ ನೇಕಾರಿಕೆ ಪುನಶ್ಚೇತನಕ್ಕೆ ಬದ್ಧವಾಗಿ ಕಾರ್ಯ ಮಾಡುವೆ’ ಎಂದು ತಿಳಿಸಿದರು.</p>.<p>ಮಾಜಿ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ‘ರೈತರ ನೇಕಾರರ ಹಾಗೂ ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಶ್ರಮಿಸದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜನತೆ ಎರಡೂ ಉಪಚುನಾವಣೆಗಳಲ್ಲಿ ಸೋಲಿಸಿ, ಬಿಜೆಪಿ ಗೆಲ್ಲಿಸುವುದು ನಿಶ್ಚಿತ’ ಎಂದು ಹೇಳಿದರು.</p>.<p>ಸಂಸದ ಜಗದೀಶ ಶೆಟ್ಟರ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಶಾಸಕರಾದ ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಿ.ಸಿ.ಪಾಟೀಲ, ಜನಾರ್ಧನ ರೆಡ್ದಿ, ಅಭ್ಯರ್ಥಿ ವೀರಣ್ಣ ಚರಂತಿಮಠ, ಪಿ.ಎಚ್.ಪೂಜಾರ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1236913766</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮತಗಿ(ಅಮೀನಗಡ): ‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಬಹುದೊಡ್ಡ ಚರ್ಚೆಯಾಗಿದ್ದು, ಇದನ್ನು ಗಮನಿಸಿದ ರಾಜ್ಯದ ಜನತೆ ಬೇಸತ್ತಿದ್ದಾರೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಉಪ ಚುನಾವಣೆಯಲ್ಲಿ ಬೀಡು ಬಿಟ್ಟಿರುವ ಇಡೀ ಸರ್ಕಾರ ರೈತರು, ನೇಕಾರರ ಸಮಸ್ಯೆಗಳನ್ನು ಅರಿಯುವ ಕೆಲಸ ಮಾಡುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ನಿಮ್ಮದು ಕುಟುಂಬ ರಾಜಕಾರಣವಲ್ಲವಾ? ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ತಮ್ಮ ಮಗನನ್ನು ರಾಜಕಾರಣಕ್ಕೆ ತಂದಿದ್ದು ಕುಟುಂಬ ರಾಜಕಾರಣವಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಈ ಹಿಂದೆ ಜಿಲ್ಲೆಯ ಬಾದಾಮಿಯಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ರಾಜಕೀಯ ಪುನರ್ಜನ್ಮ ಪಡೆದರು. ಆದರೆ ಕೈ ಹಿಡಿದ ಕ್ಷೇತ್ರವನ್ನು ಅಭಿವೃದ್ಧಿ ಮಾಡದಿರುವುದು ದುರ್ದೈವ’ ಎಂದರು.</p>.<p>‘ಈ ಭಾಗದ ಹೆಚ್ಚಿನ ಸಂಖ್ಯೆಯಲ್ಲಿರುವ ನೇಕಾರರ ಮನವಿಗೆ ಸ್ಪಂದಿಸಿ ನೇಕಾರಿಕೆ ಪುನಶ್ಚೇತನಕ್ಕೆ ಬದ್ಧವಾಗಿ ಕಾರ್ಯ ಮಾಡುವೆ’ ಎಂದು ತಿಳಿಸಿದರು.</p>.<p>ಮಾಜಿ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ‘ರೈತರ ನೇಕಾರರ ಹಾಗೂ ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಶ್ರಮಿಸದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜನತೆ ಎರಡೂ ಉಪಚುನಾವಣೆಗಳಲ್ಲಿ ಸೋಲಿಸಿ, ಬಿಜೆಪಿ ಗೆಲ್ಲಿಸುವುದು ನಿಶ್ಚಿತ’ ಎಂದು ಹೇಳಿದರು.</p>.<p>ಸಂಸದ ಜಗದೀಶ ಶೆಟ್ಟರ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಶಾಸಕರಾದ ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಿ.ಸಿ.ಪಾಟೀಲ, ಜನಾರ್ಧನ ರೆಡ್ದಿ, ಅಭ್ಯರ್ಥಿ ವೀರಣ್ಣ ಚರಂತಿಮಠ, ಪಿ.ಎಚ್.ಪೂಜಾರ, ಮಾಜಿ ಸಂಸದ ರಮೇಶ ಕತ್ತಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1236913766</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>