<p>ತಿರುವನಂತಪುರ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೇರಳಂನ ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರು. ಒಂದು ವೇಳೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಅವರು ಪ್ರತಿನಿಧಿಸಿರುವ ಆಲಪ್ಪುಳ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<p>ವೇಣುಗೋಪಾಲ್ ಅವರು ಮುಖ್ಯಮಂತ್ರಿಯಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.</p>.<p>ಈ ಕ್ಷೇತ್ರವು ಸಿಪಿಎಂ ಮತ್ತು ಕಾಂಗ್ರೆಸ್ ನಡುವಿನ ಪೈಪೋಟಿಯ ಕಣ. ಆದರೂ, ಕಾಂಗ್ರೆಸ್ನ ಹಿರಿಯ ನಾಯಕ ಈ ಹಿಂದೆ ಆಲಪ್ಪುಳದಲ್ಲಿ ಸೋಲು ಕಂಡಿದ್ದರು. ಆದ್ದರಿಂದ, ಈ ಕ್ಷೇತ್ರ ಈಗ ಕಾಂಗ್ರೆಸ್ನ ಭದ್ರಕೋಟೆಯಾಗಿ ಉಳಿದಿಲ್ಲ.</p>.<p>ಈ ಅಪಾಯದ ಬಗ್ಗೆ ಕಾಂಗ್ರೆಸ್ ಮತ್ತು ಮೈತ್ರಿಕೂಟದ ನಾಯಕರು ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘2024ರ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಸ್ಪರ್ಧಿಸಿದ್ದಾಗ ಪಕ್ಷವು ಶೇ 11ರಷ್ಟು ಮತಗಳನ್ನು ಪಡೆದಿತ್ತು. ಇದನ್ನು ಗಮನಿಸಿದರೆ, ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚು’ ಎಂದು ಪತ್ರಕರ್ತ ಜಯಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಕೇರಳಂನ ಮೂರು ವಿಧಾನಸಭಾ ಕ್ಷೇತ್ರ ಮತ್ತು ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿನ ಗೆಲುವು ಬಿಜೆಪಿಯ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.</p>.<p>2024ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ವೇಣುಗೋಪಾಲ್ ಅವರಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನ ಬಿಜೆಪಿ ಪಾಲಾಗಿದ್ದರಿಂದ ಕಾಂಗ್ರೆಸ್ ಸಾಕಷ್ಟು ಟೀಕೆಯನ್ನು ಎದುರಿಸಿತ್ತು.</p>.<p>ಇದಲ್ಲದೆ, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭ, ಹಾಲಿ ಸಂಸದರು ಸ್ಪರ್ಧಿಸಬಾರದು ಎಂಬ ಪಕ್ಷದ ನಿಯಮ ಉಲ್ಲೇಖಿಸಿ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿತ್ತು. ವೇಣುಗೋಪಾಲ್ಗೆ ವಿನಾಯಿತಿ ನೀಡಿದರೆ, ವಿಧಾನಸಭೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದ ಸಂಸದರ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.</p>.<p>ಒಂದು ವೇಳೆ, ವಿಧಾನಸಭಾ ಉಪ ಚುನಾವಣೆ ನಡೆದರೆ, ಕಾಂಗ್ರೆಸ್ನ ಯಾವುದೇ ಭದ್ರಕೋಟೆಯಿಂದ ಸ್ಪರ್ಧಿಸಿ ಗೆಲ್ಲುವುದು ವೇಣುಗೋಪಾಲ್ ಅವರಿಗೆ ಕಷ್ಟವಲ್ಲದಿದ್ದರೂ, ಪಕ್ಷದೊಳಗಿನ ಒಳಜಗಳವು ಅವರ ಗೆಲುವಿನ ಅಂತರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-79924330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೇರಳಂನ ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರು. ಒಂದು ವೇಳೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ ಅವರು ಪ್ರತಿನಿಧಿಸಿರುವ ಆಲಪ್ಪುಳ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.</p>.<p>ವೇಣುಗೋಪಾಲ್ ಅವರು ಮುಖ್ಯಮಂತ್ರಿಯಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.</p>.<p>ಈ ಕ್ಷೇತ್ರವು ಸಿಪಿಎಂ ಮತ್ತು ಕಾಂಗ್ರೆಸ್ ನಡುವಿನ ಪೈಪೋಟಿಯ ಕಣ. ಆದರೂ, ಕಾಂಗ್ರೆಸ್ನ ಹಿರಿಯ ನಾಯಕ ಈ ಹಿಂದೆ ಆಲಪ್ಪುಳದಲ್ಲಿ ಸೋಲು ಕಂಡಿದ್ದರು. ಆದ್ದರಿಂದ, ಈ ಕ್ಷೇತ್ರ ಈಗ ಕಾಂಗ್ರೆಸ್ನ ಭದ್ರಕೋಟೆಯಾಗಿ ಉಳಿದಿಲ್ಲ.</p>.<p>ಈ ಅಪಾಯದ ಬಗ್ಗೆ ಕಾಂಗ್ರೆಸ್ ಮತ್ತು ಮೈತ್ರಿಕೂಟದ ನಾಯಕರು ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘2024ರ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಸ್ಪರ್ಧಿಸಿದ್ದಾಗ ಪಕ್ಷವು ಶೇ 11ರಷ್ಟು ಮತಗಳನ್ನು ಪಡೆದಿತ್ತು. ಇದನ್ನು ಗಮನಿಸಿದರೆ, ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚು’ ಎಂದು ಪತ್ರಕರ್ತ ಜಯಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಕೇರಳಂನ ಮೂರು ವಿಧಾನಸಭಾ ಕ್ಷೇತ್ರ ಮತ್ತು ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿನ ಗೆಲುವು ಬಿಜೆಪಿಯ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.</p>.<p>2024ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ವೇಣುಗೋಪಾಲ್ ಅವರಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನ ಬಿಜೆಪಿ ಪಾಲಾಗಿದ್ದರಿಂದ ಕಾಂಗ್ರೆಸ್ ಸಾಕಷ್ಟು ಟೀಕೆಯನ್ನು ಎದುರಿಸಿತ್ತು.</p>.<p>ಇದಲ್ಲದೆ, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭ, ಹಾಲಿ ಸಂಸದರು ಸ್ಪರ್ಧಿಸಬಾರದು ಎಂಬ ಪಕ್ಷದ ನಿಯಮ ಉಲ್ಲೇಖಿಸಿ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿತ್ತು. ವೇಣುಗೋಪಾಲ್ಗೆ ವಿನಾಯಿತಿ ನೀಡಿದರೆ, ವಿಧಾನಸಭೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದ ಸಂಸದರ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.</p>.<p>ಒಂದು ವೇಳೆ, ವಿಧಾನಸಭಾ ಉಪ ಚುನಾವಣೆ ನಡೆದರೆ, ಕಾಂಗ್ರೆಸ್ನ ಯಾವುದೇ ಭದ್ರಕೋಟೆಯಿಂದ ಸ್ಪರ್ಧಿಸಿ ಗೆಲ್ಲುವುದು ವೇಣುಗೋಪಾಲ್ ಅವರಿಗೆ ಕಷ್ಟವಲ್ಲದಿದ್ದರೂ, ಪಕ್ಷದೊಳಗಿನ ಒಳಜಗಳವು ಅವರ ಗೆಲುವಿನ ಅಂತರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-79924330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>