<p>ಬಂಗಾರಪೇಟೆ: ರಾಜ್ಯದಲ್ಲಿ ಸದ್ಯ ಉಂಟಾಗಿರುವ ತೀವ್ರ ರಾಜಕೀಯ ಏರುಪೇರು ಹಾಗೂ ಮುಖ್ಯಮಂತ್ರಿ ಬದಲಾವಣೆ ವಿದ್ಯಮಾನಗಳ ಹಿನ್ನೆಲೆ ಮುಂದಿನ 8 ರಿಂದ 10 ತಿಂಗಳ ಅವಧಿಯೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಜರುಗುವುದು ನಿಶ್ಚಿತ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಗುರುವಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಕೇಂದ್ರದ ಬಿಜೆಪಿ ಸರ್ಕಾರದ ಪ್ರತಿಯೊಂದು ಐತಿಹಾಸಿಕ ಹಾಗೂ ಜನಪರ ಯೋಜನೆಗಳನ್ನು ಕಾರ್ಯಕರ್ತರು ಎಲ್ಲರಿಗೂ ತಲುಪಿಸಬೇಕು. . ಮುಂಬರುವ ಜಿ.ಪಂ, ತಾ.ಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮತದಾರರನ್ನು ಸೆಳೆಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಮುಕ್ತಗೊಳಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಗೊಂದಲದ ರಾಜಕಾರಣದಿಂದಾಗಿ ಜನಪರ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾದರೂ ನಿರೀಕ್ಷಿತ ಮಟ್ಟದ ಪ್ರಗತಿ ಸಾಧ್ಯವಿಲ್ಲ ಎಂದರು.</p>.<p>ಓಂಶಕ್ತಿ ಚಲಪತಿ, ಬಿ.ಪಿ.ವೆಂಕಟಮುನಿಯಪ್ಪ, ಬಿ.ವಿ.ಮಹೇಶ್, ಮಂಡಲ ಅಧ್ಯಕ್ಷ ಸಂಪಂಗಿರೆಡ್ಡಿ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕಪಾಲಿಶಂಕರ್, ಮಾರ್ಕಂಡೇಗೌಡ, ಶ್ರೀನಿವಾಸಗೌಡ, ಚೌಡಪ್ಪ, ಸೀತಾರಾಮಪ್ಪ, ಶಶಿಕುಮಾರ್, ರಾಧಮ್ಮ, ಹೊಸರಾಯಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-18-663638455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ರಾಜ್ಯದಲ್ಲಿ ಸದ್ಯ ಉಂಟಾಗಿರುವ ತೀವ್ರ ರಾಜಕೀಯ ಏರುಪೇರು ಹಾಗೂ ಮುಖ್ಯಮಂತ್ರಿ ಬದಲಾವಣೆ ವಿದ್ಯಮಾನಗಳ ಹಿನ್ನೆಲೆ ಮುಂದಿನ 8 ರಿಂದ 10 ತಿಂಗಳ ಅವಧಿಯೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಜರುಗುವುದು ನಿಶ್ಚಿತ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.</p>.<p>ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಗುರುವಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಕೇಂದ್ರದ ಬಿಜೆಪಿ ಸರ್ಕಾರದ ಪ್ರತಿಯೊಂದು ಐತಿಹಾಸಿಕ ಹಾಗೂ ಜನಪರ ಯೋಜನೆಗಳನ್ನು ಕಾರ್ಯಕರ್ತರು ಎಲ್ಲರಿಗೂ ತಲುಪಿಸಬೇಕು. . ಮುಂಬರುವ ಜಿ.ಪಂ, ತಾ.ಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಮತದಾರರನ್ನು ಸೆಳೆಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಮುಕ್ತಗೊಳಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.</p>.<p>ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಗೊಂದಲದ ರಾಜಕಾರಣದಿಂದಾಗಿ ಜನಪರ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾದರೂ ನಿರೀಕ್ಷಿತ ಮಟ್ಟದ ಪ್ರಗತಿ ಸಾಧ್ಯವಿಲ್ಲ ಎಂದರು.</p>.<p>ಓಂಶಕ್ತಿ ಚಲಪತಿ, ಬಿ.ಪಿ.ವೆಂಕಟಮುನಿಯಪ್ಪ, ಬಿ.ವಿ.ಮಹೇಶ್, ಮಂಡಲ ಅಧ್ಯಕ್ಷ ಸಂಪಂಗಿರೆಡ್ಡಿ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕಪಾಲಿಶಂಕರ್, ಮಾರ್ಕಂಡೇಗೌಡ, ಶ್ರೀನಿವಾಸಗೌಡ, ಚೌಡಪ್ಪ, ಸೀತಾರಾಮಪ್ಪ, ಶಶಿಕುಮಾರ್, ರಾಧಮ್ಮ, ಹೊಸರಾಯಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-18-663638455</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>