ವೈಟ್ ಕಾಲರ್ ಬಂದರೆ ಏನು ಪ್ರಯೋಜನ ಎಂದು ಜನ ಈ ಚುನಾವಣೆಯಲ್ಲಿ ತೋರಿಸುತ್ತಾರೆ. ₹593 ಕೋಟಿ ಆಸ್ತಿ ಘೋಷಿಸಿಕೊಂಡಿರುವ ಸುರೇಶ್ ಅವರ ಆದಾಯ 12 ವರ್ಷಗಳ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ ಎಂಬುದರಲ್ಲೇ ಯಾರು ಪ್ರಾಮಾಣಿಕರು ಎಂಬುದು ಗೊತ್ತಾಗುತ್ತದೆ. ಮಂಜುನಾಥ್ ಪರವಾಗಿ ಜನರೇ ಎದ್ದು ನಿಂತಿದ್ದಾರೆ. ಭ್ರಷ್ಟ ಸುರೇಶ್ ಬೇಕಾ? ಸೀದಾ ಸಾದಾ ವ್ಯಕ್ತಿತ್ವದ ಮಂಜುನಾಥ್ ಬೇಕಾ ಎಂಬುದನ್ನು ಜನ ತೀರ್ಮಾನಿಸುತ್ತಾರೆ
–ಸಿ.ಪಿ.ಯೋಗೇಶ್ವರ, ವಿಧಾನ ಪರಿಷತ್ ಸದಸ್ಯ
(ಜನರ ನಡುವೆ ನಿಂತು ಕಷ್ಟ–ಸುಖಗಳಿಗೆ ಸ್ಪಂದಿಸುವ ‘ಡಿ.ಕೆ.ಸುರೇಶ್ ಬೇಕೋ ಅಥವಾ ವೈಟ್ ಕಾಲರ್ ವ್ಯಕ್ತಿ ಬೇಕೋ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯೆ