ಪದ್ಮರಾವ್ ಗೌಡ್(ಬಿಆರ್ಎಸ್
)
ಬಿಆರ್ಎಸ್ ಪಕ್ಷವು ಸಿಕಂದರಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ಪದ್ಮರಾವ್ ಗೌಡ್ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆಗಿಳಿಸಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಏಳು ಸ್ಥಾನಗಳಲ್ಲಿ ಆರರಲ್ಲೂ ಬಿಆರ್ಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಕ್ಷೇತ್ರವನ್ನು ಬಿಜೆಪಿಯಿಂದ ಕಸಿದುಕೊಳ್ಳುವ ಉದ್ದೇಶದಿಂದ ಬಿಆರ್ಎಸ್ ವರಿಷ್ಠ ಕೆ.ಚಂದ್ರಶೇಖರ ರಾವ್ ಅವರು, ಪದ್ಮರಾವ್ ಅವರನ್ನು ಕಣಕ್ಕಿಳಿಸಿದ್ದಾರೆ. ಆದರೆ ಈ ಕ್ಷೇತ್ರವನ್ನು ಬಿಆರ್ಎಸ್ ಒಮ್ಮೆಯೂ ಗೆದ್ದಿಲ್ಲ. ಒಂದು ಕಾಲದಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಸಿಕಂದರಾಬಾದ್ ಕ್ಷೇತ್ರದಲ್ಲಿ ಆ ಬಳಿಕ ಬಿಜೆಪಿ ತನ್ನ ಬಲ ವೃದ್ಧಿಸಿಕೊಂಡಿದೆ. ಕಾರ್ಪೊರೇಟರ್ ಆಗಿ ರಾಜಕೀಯ ಜೀವನ ಆರಂಭಿಸಿದ್ದ ಪದ್ಮರಾವ್ ಅವರು 2004 ರಲ್ಲಿ ಸಿಕಂದರಾಬಾದ್ ಶಾಸಕರಾಗಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದರು.