ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಐದು ಲಕ್ಷ ಮಂದಿಯನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ಉಚಿತವಾಗಿ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುವುದು. ಅಸ್ಸಾಂನಿಂದ ಒಂದು ಲಕ್ಷ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ. ರಾಜ್ಯದ ಯುವಜನರಿಗೆ ಉದ್ಯೋಗ ನೀಡಲು ಬಿಜೆಡಿ ಸರ್ಕಾರ ವಿಫಲವಾಗಿದೆ
-ಹಿಮಂತ ಬಿಸ್ವ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ (ಒಡಿಶಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಾ)
ಲೋಕಸಭಾ ಚುನಾವಣೆಯ ಮೂರು ಹಂತಗಳ ಮತದಾನ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಆತಂಕಗೊಂಡಿದ್ದಾರೆ. ಈ ಕಾರಣಕ್ಕೆ ಅವರು ತಮ್ಮ ಭಾಷಣದಲ್ಲಿ ಮುಸ್ಲಿಮರನ್ನು ಬಹಿರಂಗವಾಗಿ ಪ್ರಸ್ತಾಪಿಸುತ್ತಿದ್ದಾರೆ. ಇದರಿಂದ ಪರಿಸ್ಥಿತಿ ಬದಲಾಗಬಹುದು ಎಂದು ಅವರು ಭಾವಿಸಿರುವಂತಿದೆ