ಪ್ರತಿ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಭ್ರಷ್ಟಾಚಾರವು ಹೆಚ್ಚಳವಾಗಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ. ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವು ಇಲ್ಲವಾಗಲಿದೆ. ಆ ಪಕ್ಷವು ಇನ್ನು ಕೆಲವು ವರ್ಷಗಳಲ್ಲಿ ಡೈನೋಸಾರ್ಗಳಂತೆ ಅಳಿದು ಹೋಗಲಿದೆ. ಕಾಂಗ್ರೆಸ್ ಪಕ್ಷವು ತುಕ್ಕು ಹಿಡಿದ ಕಬ್ಬಿಣದ ತುಂಡಿನಂತಾಗಿದೆ.
–ರಾಜನಾಥ್ ಸಿಂಗ್, ಕೇಂದ್ರ ಸಚಿವ
****
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಕ್ಷೇತ್ರಗಳನ್ನೂ ಗೆಲ್ಲದು. ಆ ಪಕ್ಷವು ಉತ್ತರ ಬಂಗಾಳಕ್ಕೆ ಏನು ಕೊಡುಗೆ ನೀಡಿದೆ? ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳಿಗೆ ಬಲಿಯಾಗಬೇಡಿ. ಅವು ಚುನಾವಣಾ ಜುಮ್ಲಾಗಳಾಗಿವೆ (ಸುಳ್ಳು). ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಬಿಜೆಪಿಯು ನಾಶಮಾಡಿದೆ.
–ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ