ನಾವು ಚುನಾವಣೆಯ ತಿಂಗಳಿಗೆ ಕಾಲಿಟ್ಟಿದ್ದೇವೆ. ಮತದಾನ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆದರೆ ಅದು ಚುನಾವಣಾ ಆಯೋಗಕ್ಕೆ ದೊರೆತ ಗೆಲುವು ಎಂದೇ ಭಾವಿಸಬೇಕು. ಸರ್ಕಾರವು ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳ ದುರ್ಬಳಕೆ ಮಾಡುವುದನ್ನು ತಡೆಯುವ ಮೂಲಕ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದುಕೊಂಡರೆ ಮಾತ್ರ ಚುನಾವಣಾ ಆಯೋಗದ ಘನತೆ ಉಳಿಯುತ್ತದೆ