<p>ರಾಮನಗರ: ಎಲ್ಲೋ ಒಂದು ಕಡೆ ಟಿಕೆಟ್ ಕೊಡಲಿಲ್ಲವೆಂದು ಮುಸ್ಲಿಮರು ಕಾಂಗ್ರೆಸ್ ಬಗ್ಗೆ ತಪ್ಪು ಅಭಿಪ್ರಾಯಕ್ಕೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಅಲ್ಪಸಂಖ್ಯಾತರಿಗೆ ಹೆಚ್ಚು ಸೀಟು ಕೊಟ್ಟಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬೇರೆಯವರಲ್ಲ. ಬಿಜೆಪಿಯವರು ಒಂದೇ ಒಂದು ಸೀಟು ಸಹ ಕೊಟ್ಟಿಲ್ಲ ಎಂದರು.</p>.<p>ದಾವಣಗೆರೆ ಉಪ ಚುನಾವಣೆ ವಿಷಯದಲ್ಲಿ ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಗುರುವಾರ ಅವರು ಪ್ರತಿಕ್ರಿಯಿಸಿದರು.</p>.<p>ಉಪ ಚುನಾವಣೆಯಲ್ಲಿ ಕೆಲವರ ವಿರುದ್ಧ ಪಕ್ಷದಿಂದ ಯಾತಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಎಂದು ತಿಳಿಸಿದರು.</p>.<p>ಕಾಂಗ್ರೆಸ್ಗೆ ಅಲ್ಪಸಂಖ್ಯಾತರು ಶಕ್ತಿ ಎಂಬುದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಸಾರಾಸಗಟಾಗಿ ಅವರು ಪಕ್ಷವನ್ನು ಬೆಂಬಲಿಸುತ್ತಾರೆ. ಜೊತೆಗೆ ಅಹಿಂದ, ಒಕ್ಕಲಿಗ, ಲಿಂಗಾಯತರು ಕೂಡ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಬಾಲಕೃಷ್ಣ ಹೇಳಿದರು.</p>.<p>ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತರು ಪಕ್ಷದ ಶಕ್ತಿಯಾಗಿದ್ದರೂ ಉಪಚುನಾವಣೆಯಲ್ಲಿ ಏನಾಗಿದೆ ಎಂಬುದನ್ನು ಹೈಕಮಾಂಡ್ ಪರಿಶೀಲನೆ ಮಾಡುತ್ತಿದೆ. ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪೇ. ಈ ಬಗ್ಗೆ ಹೈ ಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಷಯದಲ್ಲಿ ಕೆಲವರಿಗೆ ನೋವಾಗಿದೆ. ಹಾಗಾಗಿ, ಅವರು ತಮ್ಮ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-18-1745274254</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಎಲ್ಲೋ ಒಂದು ಕಡೆ ಟಿಕೆಟ್ ಕೊಡಲಿಲ್ಲವೆಂದು ಮುಸ್ಲಿಮರು ಕಾಂಗ್ರೆಸ್ ಬಗ್ಗೆ ತಪ್ಪು ಅಭಿಪ್ರಾಯಕ್ಕೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.</p>.<p>ಅಲ್ಪಸಂಖ್ಯಾತರಿಗೆ ಹೆಚ್ಚು ಸೀಟು ಕೊಟ್ಟಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬೇರೆಯವರಲ್ಲ. ಬಿಜೆಪಿಯವರು ಒಂದೇ ಒಂದು ಸೀಟು ಸಹ ಕೊಟ್ಟಿಲ್ಲ ಎಂದರು.</p>.<p>ದಾವಣಗೆರೆ ಉಪ ಚುನಾವಣೆ ವಿಷಯದಲ್ಲಿ ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಗುರುವಾರ ಅವರು ಪ್ರತಿಕ್ರಿಯಿಸಿದರು.</p>.<p>ಉಪ ಚುನಾವಣೆಯಲ್ಲಿ ಕೆಲವರ ವಿರುದ್ಧ ಪಕ್ಷದಿಂದ ಯಾತಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಎಂದು ತಿಳಿಸಿದರು.</p>.<p>ಕಾಂಗ್ರೆಸ್ಗೆ ಅಲ್ಪಸಂಖ್ಯಾತರು ಶಕ್ತಿ ಎಂಬುದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಸಾರಾಸಗಟಾಗಿ ಅವರು ಪಕ್ಷವನ್ನು ಬೆಂಬಲಿಸುತ್ತಾರೆ. ಜೊತೆಗೆ ಅಹಿಂದ, ಒಕ್ಕಲಿಗ, ಲಿಂಗಾಯತರು ಕೂಡ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಬಾಲಕೃಷ್ಣ ಹೇಳಿದರು.</p>.<p>ಅಲ್ಪಸಂಖ್ಯಾತರ ಟಾರ್ಗೆಟ್ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತರು ಪಕ್ಷದ ಶಕ್ತಿಯಾಗಿದ್ದರೂ ಉಪಚುನಾವಣೆಯಲ್ಲಿ ಏನಾಗಿದೆ ಎಂಬುದನ್ನು ಹೈಕಮಾಂಡ್ ಪರಿಶೀಲನೆ ಮಾಡುತ್ತಿದೆ. ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪೇ. ಈ ಬಗ್ಗೆ ಹೈ ಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಷಯದಲ್ಲಿ ಕೆಲವರಿಗೆ ನೋವಾಗಿದೆ. ಹಾಗಾಗಿ, ಅವರು ತಮ್ಮ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದಾರೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-18-1745274254</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>