<p>ತ್ರಿಶ್ಶೂರ್ (ಪಿಟಿಐ): ಮಣಲೂರು ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಮತದಾರರಿಗೆ ಆಹಾರ ಕಿಟ್ ವಿತರಣೆ ಆರೋಪಗಳು ಭಾನುವಾರ ವ್ಯಕ್ತವಾಗಿದ್ದು ಗದ್ದಲಕ್ಕೆ ಕಾರಣವಾಯಿತು. ಈ ವೇಳೆ ಕೇಸರಿ ಪಕ್ಷ, ಯುಡಿಎಫ್ ಮತ್ತು ಎಲ್ಡಿಎಫ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು.</p>.<p>ಮಣಲೂರಿನ ವಡನಪ್ಪಳ್ಳಿಯಲ್ಲಿನ ಗೋದಾಮಿನಲ್ಲಿ ಕಿಟ್ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂಬ ಮಾಹಿತಿ ಬಂದ ಕೂಡಲೇ ಎಲ್ಡಿಎಫ್ ಮತ್ತು ಯುಡಿಎಫ್ ಕೂಟಗಳ ಕಾರ್ಯಕರ್ತರು ಜಮಾಯಿಸಿ ಮುತ್ತಿಗೆ ಹಾಕಿದರು. ಅಲ್ಲಿದ್ದ ಬಿಜೆಪಿ ನಾಯಕ ಮತ್ತು ನಟ ದೇವನ್ ಅವರನ್ನು ಸ್ಥಳದಿಂದ ಹೋಗದಂತೆ ತಡೆದರು.</p>.<p>ಗೋದಾಮಿನ ಬಳಿ ಬಂದ ಯುಡಿಎಫ್ ಅಭ್ಯರ್ಥಿ ಟಿ.ಎನ್.ಪ್ರತಾಪನ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದರು. ‘ಬಿಜೆಪಿಯು ಮತದಾರರಿಗೆ ಹಂಚಲು 4,000 ಕಿಟ್ಗಳನ್ನು ಸಿದ್ಧಪಡಿಸಿದೆ ಮತ್ತು ಇನ್ನೂ 10,000 ಕಿಟ್ಗಳನ್ನು ತಯಾರಿಸಲು ಅಗತ್ಯವಾದ ವಸ್ತುಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿದೆ’ ಎಂದು ಅವರು ದೂರಿದರು.</p>.<p>ಗೋದಾಮಿನಲ್ಲಿರುವ ಬಿಜೆಪಿ ನಾಯಕರನ್ನು ಬಂಧಿಸುವಂತೆ ಯುಡಿಎಫ್ ಕಾರ್ಯಕರ್ತರು ಆಗ್ರಹಿಸಿದರು. ಎಲ್ಡಿಎಫ್ ಕಾರ್ಯಕರ್ತರು ಇದೇ ರೀತಿ ಬೇಡಿಕೆಗಳನ್ನು ಮುಂದಿಟ್ಟರು. ತಮ್ಮ ನಾಯಕ ಗೋದಾಮಿನಲ್ಲಿ ಸಿಲುಕಿರುವುದನ್ನು ತಿಳಿದು ಸ್ಥಳಕ್ಕೆ ಬಂದ ಬಿಜೆಪಿ ಕಾರ್ಯಕರ್ತರು ಯುಡಿಎಫ್ ಮತ್ತು ಎಲ್ಡಿಎಫ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.</p>.<p>ಪರಿಸ್ಥಿತಿ ಕೈಮೀರದಂತೆ ಪೊಲೀಸರು ಎಚ್ಚರವಹಿಸಿದರು. ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1831783742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ರಿಶ್ಶೂರ್ (ಪಿಟಿಐ): ಮಣಲೂರು ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಮತದಾರರಿಗೆ ಆಹಾರ ಕಿಟ್ ವಿತರಣೆ ಆರೋಪಗಳು ಭಾನುವಾರ ವ್ಯಕ್ತವಾಗಿದ್ದು ಗದ್ದಲಕ್ಕೆ ಕಾರಣವಾಯಿತು. ಈ ವೇಳೆ ಕೇಸರಿ ಪಕ್ಷ, ಯುಡಿಎಫ್ ಮತ್ತು ಎಲ್ಡಿಎಫ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು.</p>.<p>ಮಣಲೂರಿನ ವಡನಪ್ಪಳ್ಳಿಯಲ್ಲಿನ ಗೋದಾಮಿನಲ್ಲಿ ಕಿಟ್ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂಬ ಮಾಹಿತಿ ಬಂದ ಕೂಡಲೇ ಎಲ್ಡಿಎಫ್ ಮತ್ತು ಯುಡಿಎಫ್ ಕೂಟಗಳ ಕಾರ್ಯಕರ್ತರು ಜಮಾಯಿಸಿ ಮುತ್ತಿಗೆ ಹಾಕಿದರು. ಅಲ್ಲಿದ್ದ ಬಿಜೆಪಿ ನಾಯಕ ಮತ್ತು ನಟ ದೇವನ್ ಅವರನ್ನು ಸ್ಥಳದಿಂದ ಹೋಗದಂತೆ ತಡೆದರು.</p>.<p>ಗೋದಾಮಿನ ಬಳಿ ಬಂದ ಯುಡಿಎಫ್ ಅಭ್ಯರ್ಥಿ ಟಿ.ಎನ್.ಪ್ರತಾಪನ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದರು. ‘ಬಿಜೆಪಿಯು ಮತದಾರರಿಗೆ ಹಂಚಲು 4,000 ಕಿಟ್ಗಳನ್ನು ಸಿದ್ಧಪಡಿಸಿದೆ ಮತ್ತು ಇನ್ನೂ 10,000 ಕಿಟ್ಗಳನ್ನು ತಯಾರಿಸಲು ಅಗತ್ಯವಾದ ವಸ್ತುಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿದೆ’ ಎಂದು ಅವರು ದೂರಿದರು.</p>.<p>ಗೋದಾಮಿನಲ್ಲಿರುವ ಬಿಜೆಪಿ ನಾಯಕರನ್ನು ಬಂಧಿಸುವಂತೆ ಯುಡಿಎಫ್ ಕಾರ್ಯಕರ್ತರು ಆಗ್ರಹಿಸಿದರು. ಎಲ್ಡಿಎಫ್ ಕಾರ್ಯಕರ್ತರು ಇದೇ ರೀತಿ ಬೇಡಿಕೆಗಳನ್ನು ಮುಂದಿಟ್ಟರು. ತಮ್ಮ ನಾಯಕ ಗೋದಾಮಿನಲ್ಲಿ ಸಿಲುಕಿರುವುದನ್ನು ತಿಳಿದು ಸ್ಥಳಕ್ಕೆ ಬಂದ ಬಿಜೆಪಿ ಕಾರ್ಯಕರ್ತರು ಯುಡಿಎಫ್ ಮತ್ತು ಎಲ್ಡಿಎಫ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.</p>.<p>ಪರಿಸ್ಥಿತಿ ಕೈಮೀರದಂತೆ ಪೊಲೀಸರು ಎಚ್ಚರವಹಿಸಿದರು. ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-51-1831783742</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>