ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಮಿತಿಯ ಅಧ್ಯಕ್ಷರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ, ಲೋಕಸಭೆಯ ಕಾಂಗ್ರೆಸ್ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಸ್ಥಾನ ಕಳೆದುಕೊಂಡಿರುವ ಬಾಬುರಾವ್ ಚಿಂಚನಸೂರ್, ವಿನಯಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಳ್ಳಾರಿ ಶಾಸಕ ಅನಿಲ್ ಲಾಡ್, ಮಾಜಿ ಸಚಿವೆ ರಾಣಿ ಸತೀಶ್, ವಿ.ಆರ್. ಸುದರ್ಶನ್ ಮತ್ತಿತರರು ಪ್ರಚಾರ ಜವಾಬ್ದಾರಿಯ ಹೊಣೆ ಹೊರುವವರಲ್ಲಿ ಪ್ರಮುಖರಾಗಿದ್ದಾರೆ.