<p><strong>ನವದೆಹಲಿ (ಪಿಟಿಐ): </strong>ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಾರ್ಚ್ 21ರಂದು ಬಿಡುಗಡೆ ಮಾಡಲಿದ್ದಾರೆ. ನಮ್ಮ ಪ್ರಣಾಳಿಕೆ ಬಹುತೇಕ ಅಂತಿಮವಾಗಿದೆ ಎಂದು ಪ್ರಣಾಳಿಕೆ ರಚನೆ ಸಮಿತಿಯ ಸದಸ್ಯರಾಗಿರುವ ಕೇಂದ್ರದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.<br /> <br /> ಮಾರ್ಚ್ 16ರಂದು ನಡೆಯಲಿರುವ ಪ್ರಣಾಳಿಕೆ ಸಮಿತಿ ಸಮಿತಿಯಲ್ಲಿ ಪ್ರಣಾಳಿಕೆಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ. ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಸಮಾಲೋಚನೆ ನಡೆಸಿ ಪ್ರಣಾಳಿಕೆ ರಚಿಸಲಾಗಿದೆ.<br /> <br /> ದೇಶದಾದ್ಯಂತ ಹಲವು ಸಮುದಾಯಗಳ ಜೊತೆಗೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ನೇರ ಸಂಭಾಷಣೆ ನಡೆಸಿ ಪಡೆದುಕೊಂಡ ಅಂಶಳಗೂ ಪ್ರಣಾಳಿಕೆಯಲ್ಲಿ ಸೇರಿವೆ ಎನ್ನಲಾಗಿದೆ. ರಕ್ಷಣಾ ಸಚಿವ ಎ.ಕೆ. ಆಂಟನಿ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.<br /> <br /> <strong>ಉದ್ಯೋಗ, ಆರೋಗ್ಯದ ಹಕ್ಕು: </strong>ಹಕ್ಕುಗಳಿಗೆ ಸಂಬಂಧಿಸಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳು ಪ್ರತಿಫಲ ನೀಡುತ್ತವೆ ಎಂದು ಮನಗಂಡಿರುವ ಕಾಂಗ್ರೆಸ್, ತನ್ನ ಪ್ರಣಾಳಿಕೆಯಲ್ಲಿ ಆರೋಗ್ಯ ಮತ್ತು ಉದ್ಯೋಗದ ಹಕ್ಕನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ.<br /> ಈಗ ಸರ್ಕಾರಿ ಉದ್ಯೋಗ ಕಡಿಮೆಯಾಗುತ್ತಿದೆ. ಹಾಗಾಗಿ ಖಾಸಗಿ ವಲಯದಲ್ಲಿ ಜನರಿಗೆ ಉದ್ಯೋಗ ಒದಗಿಸುವುದಕ್ಕೆ ಸಂಬಂಧಿಸಿ ಕೆಲವು ನಿರ್ದಿಷ್ಟ ಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ಕಾಂಗ್ರೆಸ್ ಮುಂದಾಗಿದೆ.<br /> <br /> ಮಧ್ಯಮ ವರ್ಗದಿಂದ ಕೆಳಗೆ ಮತ್ತು ಬಡತನ ರೇಖೆಗಿಂತ ಮೇಲಿರುವ ಸುಮಾರು 70 ಕೋಟಿ ಜನರಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಭದ್ರತೆ ಒದಗಿಸುವ ವಿಚಾರವನ್ನು ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ. ಇದು ಪಕ್ಷದ ಪ್ರಣಾಳಿಕೆಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.<br /> ನಗರದ ಮಧ್ಯಮ ವರ್ಗ ಬಿಜೆಪಿ ಪರವಾಗಿ ವಾಲಿರುವಾಗ ಕುಶಲ ಕರ್ಮಿಗಳು ಮತ್ತು ಕಡಿಮೆ ಆದಾಯದ ವರ್ಗ ಪಕ್ಷದ ಬೆಂಬಲ ನೆಲೆಯಾಗಬಹುದು ಎಂಬ ಚಿಂತನೆ ಕಾಂಗ್ರೆಸ್ನಲ್ಲಿ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಾರ್ಚ್ 21ರಂದು ಬಿಡುಗಡೆ ಮಾಡಲಿದ್ದಾರೆ. ನಮ್ಮ ಪ್ರಣಾಳಿಕೆ ಬಹುತೇಕ ಅಂತಿಮವಾಗಿದೆ ಎಂದು ಪ್ರಣಾಳಿಕೆ ರಚನೆ ಸಮಿತಿಯ ಸದಸ್ಯರಾಗಿರುವ ಕೇಂದ್ರದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.<br /> <br /> ಮಾರ್ಚ್ 16ರಂದು ನಡೆಯಲಿರುವ ಪ್ರಣಾಳಿಕೆ ಸಮಿತಿ ಸಮಿತಿಯಲ್ಲಿ ಪ್ರಣಾಳಿಕೆಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ. ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಸಮಾಲೋಚನೆ ನಡೆಸಿ ಪ್ರಣಾಳಿಕೆ ರಚಿಸಲಾಗಿದೆ.<br /> <br /> ದೇಶದಾದ್ಯಂತ ಹಲವು ಸಮುದಾಯಗಳ ಜೊತೆಗೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ನೇರ ಸಂಭಾಷಣೆ ನಡೆಸಿ ಪಡೆದುಕೊಂಡ ಅಂಶಳಗೂ ಪ್ರಣಾಳಿಕೆಯಲ್ಲಿ ಸೇರಿವೆ ಎನ್ನಲಾಗಿದೆ. ರಕ್ಷಣಾ ಸಚಿವ ಎ.ಕೆ. ಆಂಟನಿ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.<br /> <br /> <strong>ಉದ್ಯೋಗ, ಆರೋಗ್ಯದ ಹಕ್ಕು: </strong>ಹಕ್ಕುಗಳಿಗೆ ಸಂಬಂಧಿಸಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳು ಪ್ರತಿಫಲ ನೀಡುತ್ತವೆ ಎಂದು ಮನಗಂಡಿರುವ ಕಾಂಗ್ರೆಸ್, ತನ್ನ ಪ್ರಣಾಳಿಕೆಯಲ್ಲಿ ಆರೋಗ್ಯ ಮತ್ತು ಉದ್ಯೋಗದ ಹಕ್ಕನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ.<br /> ಈಗ ಸರ್ಕಾರಿ ಉದ್ಯೋಗ ಕಡಿಮೆಯಾಗುತ್ತಿದೆ. ಹಾಗಾಗಿ ಖಾಸಗಿ ವಲಯದಲ್ಲಿ ಜನರಿಗೆ ಉದ್ಯೋಗ ಒದಗಿಸುವುದಕ್ಕೆ ಸಂಬಂಧಿಸಿ ಕೆಲವು ನಿರ್ದಿಷ್ಟ ಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ಕಾಂಗ್ರೆಸ್ ಮುಂದಾಗಿದೆ.<br /> <br /> ಮಧ್ಯಮ ವರ್ಗದಿಂದ ಕೆಳಗೆ ಮತ್ತು ಬಡತನ ರೇಖೆಗಿಂತ ಮೇಲಿರುವ ಸುಮಾರು 70 ಕೋಟಿ ಜನರಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಭದ್ರತೆ ಒದಗಿಸುವ ವಿಚಾರವನ್ನು ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ. ಇದು ಪಕ್ಷದ ಪ್ರಣಾಳಿಕೆಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.<br /> ನಗರದ ಮಧ್ಯಮ ವರ್ಗ ಬಿಜೆಪಿ ಪರವಾಗಿ ವಾಲಿರುವಾಗ ಕುಶಲ ಕರ್ಮಿಗಳು ಮತ್ತು ಕಡಿಮೆ ಆದಾಯದ ವರ್ಗ ಪಕ್ಷದ ಬೆಂಬಲ ನೆಲೆಯಾಗಬಹುದು ಎಂಬ ಚಿಂತನೆ ಕಾಂಗ್ರೆಸ್ನಲ್ಲಿ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>