<p><strong>ನವದೆಹಲಿ</strong>: ಬಿಜೆಪಿಯ ಗೆಲುವಿನ ಸಂಖ್ಯೆಯು ಲೋಕಸಭಾ ಚುನಾವಣೆಯ ಸರಳ ಬಹುಮತ ಸಂಖ್ಯೆಗಿಂತಲೂ ಕುಸಿಯುತ್ತಿದೆ ಎಂಬುದನ್ನು ಚುನಾವಣಾ ಫಲಿತಾಂಶದ ಇತ್ತೀಚಿನ ಚಿತ್ರಣ ಹೇಳುತ್ತಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಗ್ಭ್ರಮೆಗೊಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ.</p><p>ಚುನಾವಣಾ ಫಲಿತಾಂಶದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಪ್ರಧಾನಿ ಅವರಿಗೆ ನೈತಿಕವಾಗಿ ಸೋಲಾಗಿದೆ ಎಂದಿದ್ದಾರೆ.</p><p>'543 ಕ್ಷೇತ್ರಗಳ ಚಿತ್ರಣ ಸಿಕ್ಕಿದೆ. ಮೋದಿ ಅವರಿಗೆ ರಾಜಕೀಯವಾಗಿ ಹಾಗೂ ನೈತಿಕವಾಗಿ ಆಘಾತಕಾರಿ ಸೋಲಾಗಿದೆ ಎಂಬುದು ಸ್ಪಷ್ಟ. ಚುನಾವಣೋತ್ತರ ಸಮೀಕ್ಷೆಗಳ ಬಣ್ಣ ಬಯಲಾಗಿದೆ. ಅವು ಕಪೋಲಕಲ್ಪಿತ ಎಂಬುದು ಸ್ಪಷ್ಟವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.</p><p>ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ ಪಕ್ಷ ಎನಿಸಿದೆ.</p><p>ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಬಿಜೆಪಿ 243 ಕಡೆ ಮುನ್ನಡೆ/ಗೆಲುವು ಸಾಧಿಸಿದೆ. ಕಾಂಗ್ರೆಸ್ಗೆ 95 ಕ್ಷೇತ್ರಗಳಲ್ಲಿ ಮುನ್ನಡೆ/ಗೆಲುವು ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿಯ ಗೆಲುವಿನ ಸಂಖ್ಯೆಯು ಲೋಕಸಭಾ ಚುನಾವಣೆಯ ಸರಳ ಬಹುಮತ ಸಂಖ್ಯೆಗಿಂತಲೂ ಕುಸಿಯುತ್ತಿದೆ ಎಂಬುದನ್ನು ಚುನಾವಣಾ ಫಲಿತಾಂಶದ ಇತ್ತೀಚಿನ ಚಿತ್ರಣ ಹೇಳುತ್ತಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಗ್ಭ್ರಮೆಗೊಳಿಸಿದೆ ಎಂದು ಕಾಂಗ್ರೆಸ್ ಹೇಳಿದೆ.</p><p>ಚುನಾವಣಾ ಫಲಿತಾಂಶದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಪ್ರಧಾನಿ ಅವರಿಗೆ ನೈತಿಕವಾಗಿ ಸೋಲಾಗಿದೆ ಎಂದಿದ್ದಾರೆ.</p><p>'543 ಕ್ಷೇತ್ರಗಳ ಚಿತ್ರಣ ಸಿಕ್ಕಿದೆ. ಮೋದಿ ಅವರಿಗೆ ರಾಜಕೀಯವಾಗಿ ಹಾಗೂ ನೈತಿಕವಾಗಿ ಆಘಾತಕಾರಿ ಸೋಲಾಗಿದೆ ಎಂಬುದು ಸ್ಪಷ್ಟ. ಚುನಾವಣೋತ್ತರ ಸಮೀಕ್ಷೆಗಳ ಬಣ್ಣ ಬಯಲಾಗಿದೆ. ಅವು ಕಪೋಲಕಲ್ಪಿತ ಎಂಬುದು ಸ್ಪಷ್ಟವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.</p><p>ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ ಪಕ್ಷ ಎನಿಸಿದೆ.</p><p>ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಬಿಜೆಪಿ 243 ಕಡೆ ಮುನ್ನಡೆ/ಗೆಲುವು ಸಾಧಿಸಿದೆ. ಕಾಂಗ್ರೆಸ್ಗೆ 95 ಕ್ಷೇತ್ರಗಳಲ್ಲಿ ಮುನ್ನಡೆ/ಗೆಲುವು ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>