<p><strong>ಮೀರತ್(ಉತ್ತರ ಪ್ರದೇಶ):</strong> ದೂರದರ್ಶನದ ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟ ಅರುಣ್ ಗೋವಿಲ್ ಅವರು, ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p><p>ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಗೋವಿಲ್ ಜೊತೆಗಿದ್ದರು.</p><p>ನನ್ನ ಮೇಲೆ ನಂಬಿಕೆ ಇಟ್ಟ ಮತ್ತು ಮೀರತ್ನಿಂದ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಿಜೆಪಿ ವರಿಷ್ಠರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನಾಮಪತ್ರ ಸಲ್ಲಿಕೆ ಬಳಿಕ ಹೇಳಿದರು.</p><p>ಜನರಿಂದ ಅದ್ಭುತ ಬೆಂಬಲ ಸಿಕ್ಕಿದೆ ಎಂದೂ ಅವರು ಹೇಳಿದ್ದಾರೆ.</p><p>‘ಅರುಣ್ ಗೋವಿಲ್ ಇಂದು ನಾಮಪತ್ರ ಸಲ್ಲಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ 80ಕ್ಕೆ 80 ಸ್ಥಾನ ಮತ್ತು ದೇಶದಲ್ಲಿ ಎನ್ಡಿಎ 400ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿ ಕಾರ್ಯಕರ್ತರಿದ್ದಾರೆ’ಎಂದು ಮೌರ್ಯ ಹೇಳಿದರು.</p><p>‘ಈ ಕ್ಷೇತ್ರದಲ್ಲಿ ನಮಗೆ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷದಿಂದಲೂ ಎದುರಾಳಿಗಳೇ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p> .LSPolls: ₹40.94 ಕೋಟಿ ಆಸ್ತಿ ಒಡೆಯ ಪ್ರಜ್ವಲ್ ರೇವಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರತ್(ಉತ್ತರ ಪ್ರದೇಶ):</strong> ದೂರದರ್ಶನದ ರಾಮಾಯಣ ಧಾರಾವಾಹಿಯಲ್ಲಿ ರಾಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟ ಅರುಣ್ ಗೋವಿಲ್ ಅವರು, ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p><p>ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಗೋವಿಲ್ ಜೊತೆಗಿದ್ದರು.</p><p>ನನ್ನ ಮೇಲೆ ನಂಬಿಕೆ ಇಟ್ಟ ಮತ್ತು ಮೀರತ್ನಿಂದ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಿಜೆಪಿ ವರಿಷ್ಠರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನಾಮಪತ್ರ ಸಲ್ಲಿಕೆ ಬಳಿಕ ಹೇಳಿದರು.</p><p>ಜನರಿಂದ ಅದ್ಭುತ ಬೆಂಬಲ ಸಿಕ್ಕಿದೆ ಎಂದೂ ಅವರು ಹೇಳಿದ್ದಾರೆ.</p><p>‘ಅರುಣ್ ಗೋವಿಲ್ ಇಂದು ನಾಮಪತ್ರ ಸಲ್ಲಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ 80ಕ್ಕೆ 80 ಸ್ಥಾನ ಮತ್ತು ದೇಶದಲ್ಲಿ ಎನ್ಡಿಎ 400ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿ ಕಾರ್ಯಕರ್ತರಿದ್ದಾರೆ’ಎಂದು ಮೌರ್ಯ ಹೇಳಿದರು.</p><p>‘ಈ ಕ್ಷೇತ್ರದಲ್ಲಿ ನಮಗೆ ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷದಿಂದಲೂ ಎದುರಾಳಿಗಳೇ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p> .LSPolls: ₹40.94 ಕೋಟಿ ಆಸ್ತಿ ಒಡೆಯ ಪ್ರಜ್ವಲ್ ರೇವಣ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>