ಹಿಂದುಳಿದ ವರ್ಗ ಮತ್ತು ದಲಿತರಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವ ಮೂಲಕ ‘ಮತ ಜಿಹಾದ್’ ನಡೆಸಿದ್ದಾರೆ ಎಂದು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟವನ್ನು ಟೀಕಿಸುವ ಸಂದರ್ಭದಲ್ಲಿ ಮೋದಿ ಅವರು ‘ಮುಜ್ರಾ‘ ಪದ ಬಳಕೆ ಮಾಡಿದ್ದರು.
‘ಮುಸ್ಲಿಮರಲ್ಲಿ ಹಿಂದುಳಿದವರಿಗೆ ಕಳೆದ ಹಲವು ದಶಕಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್ನಲ್ಲೂ ಮೀಸಲಾತಿ ನೀಡಲಾಗುತ್ತಿದೆ. ಈ ರಾಜ್ಯದಲ್ಲಿ ಮೋದಿ ಅವರೇ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಮೋದಿ ಅವರು ಯಾವ ಜಾತಿಗೆ ಸೇರಿದ್ದಾರೋ, ಅದೇ ಜಾತಿ ಮುಸ್ಲಿಮರಲ್ಲೂ ಇದೆ. ಗುಜರಾತ್ನಲ್ಲಿ ಅವರಿಗೂ ಮೀಸಲಾತಿ ಕೊಡಲಾಗುತ್ತಿದೆ’ ಎಂದು ಜಾ ಹೇಳಿದ್ದಾರೆ.
‘ಪ್ರಧಾನಿ ಅವರೊಂದಿಗೆ ವಿಚಾರಗಳ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಅವರ ಇತ್ತೀಚಿನ ಹೇಳಿಕೆಯನ್ನು ಗಮನಿಸಿದರೆ, ಅವರಿಗೆ ತುರ್ತಾಗಿ ವೈದ್ಯಕೀಯ ನೆರವಿನ ಅಗತ್ಯವಿದೆ. ತಾನು ದೈವೀಕ ಶಕ್ತಿಯಾಗಿದ್ದೇನೆ ಎಂಬ ಹೇಳಿಕೆಯನ್ನು ಮೋದಿ ಅವರು ನೀಡಿದ್ದಾರೆ. ಇದು ಭ್ರಮೆಯ ಸಂಕೇತವಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.