ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಾರ್ಯಾಲಯವು, ‘ವಿಜಯವಾಡದ ಸಿಂಘ್ ನಗರದಲ್ಲಿ ಬಸ್ ಯಾತ್ರೆ ನಡೆಸುತ್ತಿದ್ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆದಿದೆ. ಅವರಿಗೆ ಕಲ್ಲೇಟು ಬಿದ್ದ ತಕ್ಷಣವೇ ಅವರನ್ನು ಬಸ್ ಒಳಕ್ಕೆ ಕರೆದೊಯ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ’ ಎಂದು ಹೇಳಿದೆ.