<p><strong>ಅಮರಾವತಿ:</strong> ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ಚುನಾವಣಾ ಅಫಿಡವಿಟ್ನಲ್ಲಿ ಸ್ಥಿರ ಮತ್ತು ಚರ ಆಸ್ತಿ ಸೇರಿ ಒಟ್ಟು ₹ 5,785 ಕೋಟಿಯನ್ನು ಘೋಷಣೆ ಮಾಡಿದ್ದಾರೆ.</p><p>ಪಿ. ಚಂದ್ರಶೇಖರ್ ಅವರು ಆಂಧ್ರದಲ್ಲಿ ಅತ್ಯಂತ ಸಿರಿವಂತ ಅಭ್ಯರ್ಥಿಯಾಗಿದ್ದಾರೆ. ಚಂದ್ರಶೇಖರ್ ಹೆಸರಲ್ಲಿ ₹ 2,448 ಕೋಟಿ, ಪತ್ನಿ ಶ್ರೀರತ್ನ ಹೆಸರಲ್ಲಿ ₹ 2,343 ಹಾಗೂ ಮಕ್ಕಳ ಹೆಸರಲ್ಲಿ ₹ 1000 ಕೋಟಿ ಸ್ಥಿರ ಮತ್ತು ಚರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.</p><p>ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಪುತ್ರ ನಕುಲ್ ನಾಥ್ ಅವರು ₹ 717 ಕೋಟಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿ ಘೋಷಣೆ ಮಾಡಿಕೊಂಡಿದ್ದರು. ಮೊದಲ ಹಂತದ ಚುನಾವಣೆಯ ಅಭ್ಯರ್ಥಿಗಳ ಪೈಕಿ ಇವರು ಶ್ರೀಮಂತ ಅಭ್ಯರ್ಥಿಯಾಗಿದ್ದರು.</p><p>ಚಂದ್ರಶೇಖರ್ ಅವರು ಅಮೆರಿಕದ ಬ್ಯಾಂಕ್ಗಳು, ಸಂಸ್ಥೆಗಳು ಹಾಗೂ ಅಲ್ಲಿನ ಷೇರುಪೇಟೆಯಲ್ಲಿ ಹೂಡಿಕೆ ಮಾಡಿದ್ದಾರೆ. ಚಂದ್ರಶೇಖರ್ ವೈದ್ಯರಾಗಿದ್ದು ಅಮೆರಿಕದ ಹಲವು ಪ್ರಸಿದ್ಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದಾರೆ. ಇವರು ಟಿಡಿಪಿಯ ಎನ್ಆರ್ಐ ಘಟಕದ ಮುಖ್ಯಸ್ಥರಾಗಿ ಪಕ್ಷಕ್ಕೆ ಕೆಲಸ ಮಾಡಿದ್ದಾರೆ.</p><p>ಪ್ರಸ್ತುತ ಅವರು ವೈ.ಎಸ್.ಆರ್.ಕಾಂಗ್ರೆಸ್ ಪಕ್ಷದ ಕೆ.ವೆಂಕಟ್ ವಿರುದ್ಧ ಚಂದ್ರಶೇಖರ್ ಸ್ಪರ್ಧೆ ಮಾಡುತ್ತಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ಚುನಾವಣಾ ಅಫಿಡವಿಟ್ನಲ್ಲಿ ಸ್ಥಿರ ಮತ್ತು ಚರ ಆಸ್ತಿ ಸೇರಿ ಒಟ್ಟು ₹ 5,785 ಕೋಟಿಯನ್ನು ಘೋಷಣೆ ಮಾಡಿದ್ದಾರೆ.</p><p>ಪಿ. ಚಂದ್ರಶೇಖರ್ ಅವರು ಆಂಧ್ರದಲ್ಲಿ ಅತ್ಯಂತ ಸಿರಿವಂತ ಅಭ್ಯರ್ಥಿಯಾಗಿದ್ದಾರೆ. ಚಂದ್ರಶೇಖರ್ ಹೆಸರಲ್ಲಿ ₹ 2,448 ಕೋಟಿ, ಪತ್ನಿ ಶ್ರೀರತ್ನ ಹೆಸರಲ್ಲಿ ₹ 2,343 ಹಾಗೂ ಮಕ್ಕಳ ಹೆಸರಲ್ಲಿ ₹ 1000 ಕೋಟಿ ಸ್ಥಿರ ಮತ್ತು ಚರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.</p><p>ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಪುತ್ರ ನಕುಲ್ ನಾಥ್ ಅವರು ₹ 717 ಕೋಟಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿ ಘೋಷಣೆ ಮಾಡಿಕೊಂಡಿದ್ದರು. ಮೊದಲ ಹಂತದ ಚುನಾವಣೆಯ ಅಭ್ಯರ್ಥಿಗಳ ಪೈಕಿ ಇವರು ಶ್ರೀಮಂತ ಅಭ್ಯರ್ಥಿಯಾಗಿದ್ದರು.</p><p>ಚಂದ್ರಶೇಖರ್ ಅವರು ಅಮೆರಿಕದ ಬ್ಯಾಂಕ್ಗಳು, ಸಂಸ್ಥೆಗಳು ಹಾಗೂ ಅಲ್ಲಿನ ಷೇರುಪೇಟೆಯಲ್ಲಿ ಹೂಡಿಕೆ ಮಾಡಿದ್ದಾರೆ. ಚಂದ್ರಶೇಖರ್ ವೈದ್ಯರಾಗಿದ್ದು ಅಮೆರಿಕದ ಹಲವು ಪ್ರಸಿದ್ಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದಾರೆ. ಇವರು ಟಿಡಿಪಿಯ ಎನ್ಆರ್ಐ ಘಟಕದ ಮುಖ್ಯಸ್ಥರಾಗಿ ಪಕ್ಷಕ್ಕೆ ಕೆಲಸ ಮಾಡಿದ್ದಾರೆ.</p><p>ಪ್ರಸ್ತುತ ಅವರು ವೈ.ಎಸ್.ಆರ್.ಕಾಂಗ್ರೆಸ್ ಪಕ್ಷದ ಕೆ.ವೆಂಕಟ್ ವಿರುದ್ಧ ಚಂದ್ರಶೇಖರ್ ಸ್ಪರ್ಧೆ ಮಾಡುತ್ತಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>