<p><strong>ಭುವನೇಶ್ವರ:</strong> ಒಡಿಶಾದಲ್ಲಿ ಬಿಜೆಪಿಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ಶುಕ್ರವಾರ ತಿಳಿಸಿದರು.</p><p>ಇದರೊಂದಿಗೆ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಜತೆಗೆ ಬಿಜೆಪಿಯು ಬಹು ದಿನಗಳಿಂದ ನಡೆಸುತ್ತಿದ್ದ ಮೈತ್ರಿ ಮಾತುಕತೆ ವಿಫಲವಾದಂತಾಗಿದೆ.</p><p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಮತ್ತು ಒಡಿಶಾ ಅಭಿವೃದ್ಧಿಗಾಗಿ ಲೋಕಸಭೆಯ 21 ಮತ್ತು ವಿಧಾನಸಭೆಯ 147 ಕ್ಷೇತ್ರಗಳಲ್ಲಿ ಬಿಜೆಪಿಯು ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ವಿವಿಧ ಸಂದರ್ಭಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಮಾಲ್ ಧನ್ಯವಾದ ತಿಳಿಸಿದರು. </p><p><strong>ಬಿಜೆಡಿ ಸ್ಪಷ್ಟನೆ: </strong>ಬಿಜೆಪಿಯ ಹೇಳಿಕೆಯ ಬೆನ್ನಲ್ಲೇ ಬಿಜೆಡಿಯೂ ಈ ಸಂಬಂಧ ಸ್ಪಷ್ಟನೆ ನೀಡಿದೆ. ಒಡಿಶಾದ 21 ಲೋಕಸಭಾ ಕ್ಷೇತ್ರಗಳು ಮತ್ತು 147 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸಲಿದೆ ಎಂದು ಬಿಜೆಡಿ ಸಂಘಟನಾ ಕಾರ್ಯದರ್ಶಿ ಪ್ರಣವ್ ಪ್ರಕಾಶ್ ದಾಸ್ ಹೇಳಿದ್ದಾರೆ.</p><p>‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಡಿ ರಾಜ್ಯದಲ್ಲಿ ಮೂರನೇ ನಾಲ್ಕರಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>‘ಜಗನ್ನಾಥನ ಆಶೀರ್ವಾದ ಮತ್ತು ರಾಜ್ಯದ ಜನರ ನಂಬಿಕೆಯಿಂದ ಬಿಜೆಡಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ ಹಿಂದೆಂದೂ ಇಲ್ಲದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ’ ಎಂದು ತಿಳಿಸಿದ್ದಾರೆ.</p><p>ಬಿಜೆಡಿ ಮತ್ತು ಬಿಜೆಪಿ 1998ರಿಂದ 2009ರವರೆಗೆ, 11 ವರ್ಷ ಕಾಲ, ಮೈತ್ರಿಯಲ್ಲಿದ್ದು, ಮೂರು ಲೋಕಸಭಾ ಚುನಾವಣೆ ಮತ್ತು ಎರಡು ವಿಧಾನಸಭಾ ಚುನಾವಣೆಗಳನ್ನು ಜೊತೆಯಾಗಿ ಎದುರಿಸಿದ್ದವು.</p>.<p><strong>ತಮಿಳುನಾಡು: 14 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ</strong></p><p>ತಮಿಳುನಾಡಿನ 14 ಲೋಕಸಭಾ ಕ್ಷೇತ್ರಗಳಿಗೆ ಮತ್ತು ಪುದುಚೇರಿಯ ಏಕೈಕ ಕ್ಷೇತ್ರಕ್ಕೆ ಬಿಜೆಪಿ ಶುಕ್ರವಾರ ಅಭ್ಯರ್ಥಿಗಳನ್ನು ಘೋಷಿಸಿದೆ.</p><p>ಪುದುಚೇರಿಯಲ್ಲಿ ಸಚಿವ ನಮಃಶಿವಾಯಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.</p><p>ತನ್ನ ಮಿತ್ರಪಕ್ಷವಾದ ಪಟ್ಟಾಳ್ ಮಕ್ಕಳ್ ಕಚ್ಚಿ (ಪಿಎಂಕೆ)ಗೆ ಬಿಜೆಪಿಯು 10 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು, ಉಳಿದ ಕೆಲವು ಕ್ಷೇತ್ರಗಳನ್ನು ಮೈತ್ರಿಕೂಟದಲ್ಲಿರುವ ಇತರ ಸಣ್ಣ ಪಕ್ಷಗಳಿಗೆ ನೀಡಿದೆ.</p><p>ಪಕ್ಷವು ಗುರುವಾರ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಅಣ್ಣಾಮಲೈ ಕೊಯಮತ್ತೂರಿನಿಂದ, ಕೇಂದ್ರ ಸಚಿವ ಎಲ್.ಮುರುಗನ್ ನೀಲ್ಗಿರೀಸ್ನಿಂದ, ತಮಿಳ್ ಇಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ, ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧಿಸುತ್ತಿದ್ದಾರೆ.</p>.<p><strong>ಬಿಆರ್ಎಸ್ನಿಂದ ಇಬ್ಬರ ಹೆಸರು ಘೋಷಣೆ</strong></p><p>ಹೈದರಾಬಾದ್ (ಪಿಟಿಐ): ಬಿಆರ್ಎಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ತೆಲಂಗಾಣದಲ್ಲಿ ಮತ್ತೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ. ಮಾಜಿ ಐಎಎಸ್ ಅಧಿಕಾರಿ ವೆಂಕಟರಾಮ ರೆಡ್ಡಿ ಮೇಡಕ್ ಕ್ಷೇತ್ರದಿಂದ, ಮಾಜಿ ಐಪಿಎಸ್ ಅಧಿಕಾರಿ ಆರ್.ಎಸ್.ಪ್ರವೀಣ್ ಕುಮಾರ್ ನಾಗರಕರ್ನೂಲ್ನಿಂದ ಕಣಕ್ಕಿಳಿಯುತ್ತಿದ್ದಾರೆ.</p><p>ವೆಂಕಟರಾಮ ರೆಡ್ಡಿ ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದರೆ, ಆರ್.ಎಸ್.ಪ್ರವೀಣ್ ಕುಮಾರ್ ಇತ್ತೀಚೆಗೆ ತಾನೇ ಬಿಎಸ್ಪಿ ತ್ಯಜಿಸಿ ಬಿಆರ್ಎಸ್ ಸೇರ್ಪಡೆಯಾಗಿದ್ದರು.</p><p>ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷವು ತೆಲಂಗಾಣದ 17 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದಲ್ಲಿ ಬಿಜೆಪಿಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ಶುಕ್ರವಾರ ತಿಳಿಸಿದರು.</p><p>ಇದರೊಂದಿಗೆ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಜತೆಗೆ ಬಿಜೆಪಿಯು ಬಹು ದಿನಗಳಿಂದ ನಡೆಸುತ್ತಿದ್ದ ಮೈತ್ರಿ ಮಾತುಕತೆ ವಿಫಲವಾದಂತಾಗಿದೆ.</p><p>‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಮತ್ತು ಒಡಿಶಾ ಅಭಿವೃದ್ಧಿಗಾಗಿ ಲೋಕಸಭೆಯ 21 ಮತ್ತು ವಿಧಾನಸಭೆಯ 147 ಕ್ಷೇತ್ರಗಳಲ್ಲಿ ಬಿಜೆಪಿಯು ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ವಿವಿಧ ಸಂದರ್ಭಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಸಮಾಲ್ ಧನ್ಯವಾದ ತಿಳಿಸಿದರು. </p><p><strong>ಬಿಜೆಡಿ ಸ್ಪಷ್ಟನೆ: </strong>ಬಿಜೆಪಿಯ ಹೇಳಿಕೆಯ ಬೆನ್ನಲ್ಲೇ ಬಿಜೆಡಿಯೂ ಈ ಸಂಬಂಧ ಸ್ಪಷ್ಟನೆ ನೀಡಿದೆ. ಒಡಿಶಾದ 21 ಲೋಕಸಭಾ ಕ್ಷೇತ್ರಗಳು ಮತ್ತು 147 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸಲಿದೆ ಎಂದು ಬಿಜೆಡಿ ಸಂಘಟನಾ ಕಾರ್ಯದರ್ಶಿ ಪ್ರಣವ್ ಪ್ರಕಾಶ್ ದಾಸ್ ಹೇಳಿದ್ದಾರೆ.</p><p>‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಡಿ ರಾಜ್ಯದಲ್ಲಿ ಮೂರನೇ ನಾಲ್ಕರಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>‘ಜಗನ್ನಾಥನ ಆಶೀರ್ವಾದ ಮತ್ತು ರಾಜ್ಯದ ಜನರ ನಂಬಿಕೆಯಿಂದ ಬಿಜೆಡಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ ಹಿಂದೆಂದೂ ಇಲ್ಲದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ’ ಎಂದು ತಿಳಿಸಿದ್ದಾರೆ.</p><p>ಬಿಜೆಡಿ ಮತ್ತು ಬಿಜೆಪಿ 1998ರಿಂದ 2009ರವರೆಗೆ, 11 ವರ್ಷ ಕಾಲ, ಮೈತ್ರಿಯಲ್ಲಿದ್ದು, ಮೂರು ಲೋಕಸಭಾ ಚುನಾವಣೆ ಮತ್ತು ಎರಡು ವಿಧಾನಸಭಾ ಚುನಾವಣೆಗಳನ್ನು ಜೊತೆಯಾಗಿ ಎದುರಿಸಿದ್ದವು.</p>.<p><strong>ತಮಿಳುನಾಡು: 14 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ</strong></p><p>ತಮಿಳುನಾಡಿನ 14 ಲೋಕಸಭಾ ಕ್ಷೇತ್ರಗಳಿಗೆ ಮತ್ತು ಪುದುಚೇರಿಯ ಏಕೈಕ ಕ್ಷೇತ್ರಕ್ಕೆ ಬಿಜೆಪಿ ಶುಕ್ರವಾರ ಅಭ್ಯರ್ಥಿಗಳನ್ನು ಘೋಷಿಸಿದೆ.</p><p>ಪುದುಚೇರಿಯಲ್ಲಿ ಸಚಿವ ನಮಃಶಿವಾಯಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.</p><p>ತನ್ನ ಮಿತ್ರಪಕ್ಷವಾದ ಪಟ್ಟಾಳ್ ಮಕ್ಕಳ್ ಕಚ್ಚಿ (ಪಿಎಂಕೆ)ಗೆ ಬಿಜೆಪಿಯು 10 ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು, ಉಳಿದ ಕೆಲವು ಕ್ಷೇತ್ರಗಳನ್ನು ಮೈತ್ರಿಕೂಟದಲ್ಲಿರುವ ಇತರ ಸಣ್ಣ ಪಕ್ಷಗಳಿಗೆ ನೀಡಿದೆ.</p><p>ಪಕ್ಷವು ಗುರುವಾರ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಅಣ್ಣಾಮಲೈ ಕೊಯಮತ್ತೂರಿನಿಂದ, ಕೇಂದ್ರ ಸಚಿವ ಎಲ್.ಮುರುಗನ್ ನೀಲ್ಗಿರೀಸ್ನಿಂದ, ತಮಿಳ್ ಇಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ, ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧಿಸುತ್ತಿದ್ದಾರೆ.</p>.<p><strong>ಬಿಆರ್ಎಸ್ನಿಂದ ಇಬ್ಬರ ಹೆಸರು ಘೋಷಣೆ</strong></p><p>ಹೈದರಾಬಾದ್ (ಪಿಟಿಐ): ಬಿಆರ್ಎಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ತೆಲಂಗಾಣದಲ್ಲಿ ಮತ್ತೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದೆ. ಮಾಜಿ ಐಎಎಸ್ ಅಧಿಕಾರಿ ವೆಂಕಟರಾಮ ರೆಡ್ಡಿ ಮೇಡಕ್ ಕ್ಷೇತ್ರದಿಂದ, ಮಾಜಿ ಐಪಿಎಸ್ ಅಧಿಕಾರಿ ಆರ್.ಎಸ್.ಪ್ರವೀಣ್ ಕುಮಾರ್ ನಾಗರಕರ್ನೂಲ್ನಿಂದ ಕಣಕ್ಕಿಳಿಯುತ್ತಿದ್ದಾರೆ.</p><p>ವೆಂಕಟರಾಮ ರೆಡ್ಡಿ ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದರೆ, ಆರ್.ಎಸ್.ಪ್ರವೀಣ್ ಕುಮಾರ್ ಇತ್ತೀಚೆಗೆ ತಾನೇ ಬಿಎಸ್ಪಿ ತ್ಯಜಿಸಿ ಬಿಆರ್ಎಸ್ ಸೇರ್ಪಡೆಯಾಗಿದ್ದರು.</p><p>ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷವು ತೆಲಂಗಾಣದ 17 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>