‘ಬಿಜೆಪಿಯ ಕೆಲವು ನಾಯಕರು ಮಹಾತ್ಮಾ ಗಾಂಧಿ ಅವರನ್ನು ನಿಂದಿಸಿದ್ದಾರೆ. ಮತ್ತೆ ಕೆಲವರು, ಗೋಡ್ಸೆ ಮತ್ತು ಗಾಂಧಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ ಎಂದಿದ್ದಾರೆ. ಬಿಜೆಪಿಯ ‘ಅಬ್ ಕಿ ಬಾರ್ 400 ಪಾರ್’ ಘೋಷಣೆಯು ಸಂವಿಧಾನ ಬದಲಾಯಿಸುವ ಬಯಕೆಯನ್ನು ಸೂಚಿಸುತ್ತದೆ. ಬಿಜೆಪಿ ನಾಯಕರು ಪದೇ ಪದೇ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವುದು ಏಕೆ? ಈ ಬಗ್ಗೆ ಮೋದಿ ಮೌನ ಮುರಿಯಬೇಕು’ ಎಂದು ಹೇಳಿದ್ದಾರೆ.