‘ದೇವಾಂಶು ಅವರು ತಮ್ಮ ಫೇಸ್ಬುಕ್ ಪೋಸ್ಟ್ ಮೂಲಕ ನನ್ನ ಕಕ್ಷಿದಾರರ ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆ, ‘ಸ್ವಸ್ಥ್ಯ ಸಾಥಿ’ ಯೋಜನೆಯ ವಿವರಗಳು, ‘ದೌರೆ ಸರ್ಕಾರ್’ ಯೋಜನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಇದು ನನ್ನ ಕಕ್ಷಿದಾರರ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ ಮತ್ತು ಅವರ ಘನತೆಗೆ ಧಕ್ಕೆ ತಂದಿದೆ’ ಎಂದು ರೇಖಾ ಅವರ ವಕೀಲರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.