‘ರಾಜಕೀಯ ಪಕ್ಷವೊಂದು ತನ್ನ ಪ್ರಣಾಳಿಕೆಯಲ್ಲಿ ನೀಡುವ ಭರವಸೆಗಳು ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಹಣಕಾಸಿನ ನೆರವು ಒದಗಿಸುವಂತೆ ಇದ್ದರೆ, ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಾಚಾರವಾಗಿ ಪರಿಗಣಿತವಾಗುತ್ತದೆ ಎಂದು ವಕೀಲರು ಮಂಡಿಸಿರುವ ವಾದವನ್ನು ಒಪ್ಪಲು ಆಗುವುದಿಲ್ಲ’ ಎಂದು ಪೀಠವು ಸ್ಪಷ್ಟಪಡಿಸಿದೆ.