<p><strong>ಜಮುಯ್ (ಬಿಹಾರ):</strong> ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ದೇಶಕ್ಕೆ ಅಪಕೀರ್ತಿ ಬಂದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. </p><p>ಜಮುಯ್ನಲ್ಲಿ ಗುರುವಾರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೆಯೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ತಿರುಗೇಟು ನೀಡುತ್ತಿದ್ದು, ಮಗಧ ಸಾಮ್ರಾಜ್ಯದ ಪ್ರಾಚೀನ ವೈಭವ ಮರುಕಳಿಸಿದೆ ಎಂದು ಹೇಳಿದ್ದಾರೆ. </p><p>ದೆಹಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಅವರು, ಒಬ್ಬರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದವರೆಲ್ಲ ಈಗ ಮೋದಿ ವಿರುದ್ಧ ದಾಳಿ ನಡೆಸಲು ಒಂದಾಗಿದ್ದಾರೆ ಎಂದು ಟೀಕಿಸಿದರು. </p><p>ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಕಳಂಕರಹಿತ ದಾಖಲೆ ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಹೊಗಳಿದರು. </p><p>ಬಿಹಾರದಲ್ಲಿ ಎಲ್ಲ 40 ಸ್ಥಾನಗಳಲ್ಲಿ ಎನ್ಡಿಎ ಮೈತ್ರಿ ಗೆಲ್ಲಲು ಜನರು ಬಯಸುತ್ತಾರೆ. ಆ ಮೂಲಕ ದೇಶದಲ್ಲಿ 400ಕ್ಕೂ ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮುಯ್ (ಬಿಹಾರ):</strong> ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ದೇಶಕ್ಕೆ ಅಪಕೀರ್ತಿ ಬಂದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ. </p><p>ಜಮುಯ್ನಲ್ಲಿ ಗುರುವಾರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೆಯೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ತಿರುಗೇಟು ನೀಡುತ್ತಿದ್ದು, ಮಗಧ ಸಾಮ್ರಾಜ್ಯದ ಪ್ರಾಚೀನ ವೈಭವ ಮರುಕಳಿಸಿದೆ ಎಂದು ಹೇಳಿದ್ದಾರೆ. </p><p>ದೆಹಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಅವರು, ಒಬ್ಬರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದವರೆಲ್ಲ ಈಗ ಮೋದಿ ವಿರುದ್ಧ ದಾಳಿ ನಡೆಸಲು ಒಂದಾಗಿದ್ದಾರೆ ಎಂದು ಟೀಕಿಸಿದರು. </p><p>ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಕಳಂಕರಹಿತ ದಾಖಲೆ ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಹೊಗಳಿದರು. </p><p>ಬಿಹಾರದಲ್ಲಿ ಎಲ್ಲ 40 ಸ್ಥಾನಗಳಲ್ಲಿ ಎನ್ಡಿಎ ಮೈತ್ರಿ ಗೆಲ್ಲಲು ಜನರು ಬಯಸುತ್ತಾರೆ. ಆ ಮೂಲಕ ದೇಶದಲ್ಲಿ 400ಕ್ಕೂ ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>