<p><strong>ತಿರುವನಂತಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೇವಡಿ ಮಾಡಲು ಬಳಸಿದ್ದ ಹಳೆಯ ಹೆಸರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶುಕ್ರವಾರ ಉಲ್ಲೇಖಿಸಿದ್ದು, ಇದಕ್ಕೆ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಸಿಪಿಎಂನ ಹಿರಿಯ ಮುಖಂಡ ವಿ.ಎಸ್.ಅಚ್ಯುತಾನಂದನ್ ಅವರು ದಶಕಗಳ ಹಿಂದೆ ‘ಅಮೂಲ್ ಬೇಬಿ’ ಎಂದು ರಾಹುಲ್ ಅವರನ್ನು ಕರೆದಿದ್ದನ್ನು ಪಿಣರಾಯಿ ಅವರು ಉಲ್ಲೇಖಿಸಿದ್ದಾರೆ.</p>.<p>ಪಿಣರಾಯಿ ವಿಜಯನ್ ಅವರನ್ನು ಕೇಂದ್ರದ ಬಿಜೆಪಿ ಸರ್ಕಾರವು ಯಾಕೆ ಜೈಲಿಗೆ ಕಳುಹಿಸಿಲ್ಲ ಎಂದು ರಾಹುಲ್ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ವಿಜಯನ್ ಅವರು ಈ ಹೇಳಿಕೆ ನೀಡಿದ್ದರು. ರಾಹುಲ್ ಅವರು ತಮ್ಮ ವರ್ಚಸ್ಸನ್ನು ಸುಧಾರಿಸಿಕೊಂಡಿಲ್ಲ ಎಂದೂ ಹೇಳಿದ್ದರು.</p>.<p>ರಾಹುಲ್ ಕುರಿತು ವಿಜಯನ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ, ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ವಿಜಯನ್ ಅವರು ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೇವಡಿ ಮಾಡಲು ಬಳಸಿದ್ದ ಹಳೆಯ ಹೆಸರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶುಕ್ರವಾರ ಉಲ್ಲೇಖಿಸಿದ್ದು, ಇದಕ್ಕೆ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಸಿಪಿಎಂನ ಹಿರಿಯ ಮುಖಂಡ ವಿ.ಎಸ್.ಅಚ್ಯುತಾನಂದನ್ ಅವರು ದಶಕಗಳ ಹಿಂದೆ ‘ಅಮೂಲ್ ಬೇಬಿ’ ಎಂದು ರಾಹುಲ್ ಅವರನ್ನು ಕರೆದಿದ್ದನ್ನು ಪಿಣರಾಯಿ ಅವರು ಉಲ್ಲೇಖಿಸಿದ್ದಾರೆ.</p>.<p>ಪಿಣರಾಯಿ ವಿಜಯನ್ ಅವರನ್ನು ಕೇಂದ್ರದ ಬಿಜೆಪಿ ಸರ್ಕಾರವು ಯಾಕೆ ಜೈಲಿಗೆ ಕಳುಹಿಸಿಲ್ಲ ಎಂದು ರಾಹುಲ್ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ವಿಜಯನ್ ಅವರು ಈ ಹೇಳಿಕೆ ನೀಡಿದ್ದರು. ರಾಹುಲ್ ಅವರು ತಮ್ಮ ವರ್ಚಸ್ಸನ್ನು ಸುಧಾರಿಸಿಕೊಂಡಿಲ್ಲ ಎಂದೂ ಹೇಳಿದ್ದರು.</p>.<p>ರಾಹುಲ್ ಕುರಿತು ವಿಜಯನ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ, ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ವಿಜಯನ್ ಅವರು ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>