<p>ಚೆನ್ನೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ರಾಜ್ಯದಲ್ಲಿಯೂ ಎಲ್ಲ ಮಹಿಳೆಯರಿಗೆ ತಿಂಗಳಿಗೆ ₹1 ಸಾವಿರ ನೀಡಲಾಗುವುದು. ಅಲ್ಲದೆ, ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿಯನ್ನು ತಕ್ಷಣವೇ ಅನುಷ್ಠಾನಗೊಳಿಸಲಾಗುವುದು ಎಂದು ಡಿಎಂಕೆ ಭರವಸೆ ನೀಡಿದೆ.</p>.<p>‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಾಲುದಾರ ಹಾಗೂ ತಮಿಳುನಾಡಿನ ಆಡಳಿತರೂಢ ಪಕ್ಷವಾದ ಡಿಎಂಕೆ, ಬುಧವಾರ ಬಿಡುಗಡೆ ಮಾಡಿದ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಆಶ್ವಾಸನೆ ನೀಡಿದೆ.</p>.<p>ಸಾಮಾಜಿಕ ನ್ಯಾಯದ ಆಧಾರದ ಮೇಲೆ ಶಿಕ್ಷಣ ಮತ್ತು ಉದ್ಯೋಗದಲ್ಲೂ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವುದಾಗಿಯೂ ಹೇಳಿದೆ. </p>.<p>ಎನ್ಡಿಎ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಪಡಿಸಲಾಗುವುದು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಮಾಡುವ ಜತೆಗೆ ಅಲ್ಲಿ ಚುನಾವಣೆ ನಡೆಸಲಾಗುವುದು ಎಂದೂ ಹೇಳಿದೆ.</p>.<p>ಅಲ್ಲದೆ, ಹೊಸ ಶಿಕ್ಷಣ ನೀತಿ 2020 ರದ್ದತಿ, ಇಂಧನ ಬೆಲೆ ಕಡಿತ, ಕಾನೂನು ಕ್ರಮದಿಂದ ರಾಜ್ಯಪಾಲರಿಗೆ ರಕ್ಷಣೆ ನೀಡುವ ಸಂವಿಧಾನದ 361ನೇ ವಿಧಿ ರದ್ದು ಮತ್ತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ರಾಜ್ಯಪಾಲರ ನೇಮಕಕ್ಕೆ ಕ್ರಮ ತೆಗೆದುಕೊಳ್ಳುವುದಾಗಿಯೂ ಪ್ರಕಟಿಸಿದೆ.</p>.<p>ಎಂ.ಎಸ್. ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕೆ ತರಲಾಗುವುದು. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಖಾತ್ರಿಗೆ ಕ್ರಮ ವಹಿಸಲಾಗುವುದು. ಅಲ್ಲದೆ, ಅಗ್ನಿಪಥ್ ಯೋಜನೆ ಕೈಬಿಟ್ಟು, ಸೇನಾ ಸಶಸ್ತ್ರ ಪಡೆಗಳಲ್ಲಿ ಶಾಶ್ವತ ನೇಮಕಾತಿಯನ್ನು ಪುನಃ ಆರಂಭಿಸುವುದಾಗಿಯೂ ಹೇಳಿದೆ.</p>.<p>ಜಾತಿವಾರು ಜನಗಣತಿ ಮತ್ತು ಬಡತನ ರೇಖೆಗಿಂತ ಕೆಳಗಿರುವವರ ಆರ್ಥಿಕ ಸಮೀಕ್ಷೆ ಸೇರಿದಂತೆ ಜನಗಣತಿಯನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ನಡೆಸುವುದಾಗಿಯೂ ಪ್ರಕಟಿಸಿದೆ.</p>.<p><strong>ಪ್ರಣಾಳಿಕೆಯಲ್ಲಿರುವ ಪ್ರಮುಖ ಭರವಸೆಗಳು</strong></p>.<p>* ಪೆಟ್ರೋಲ್ ಲೀಟರ್ಗೆ ₹75, ಡೀಸೆಲ್ಗೆ ₹65 ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹500ಕ್ಕೆ ನಿಗದಿಪಡಿಸಲಾಗುವುದು</p>.<p>* ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಲಕ್ಷದವರೆಗೆ ಬಡ್ಡಿ ರಹಿತ ಸಾಲ; ದೇಶದಾದ್ಯಂತ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ವಾಹನ ಸಾಲ</p>.<p>* ಲಿಂಗ ಸಮಾನತೆಗೆ ಒತ್ತು ನೀಡುವ ನೀಡುವ ಮೂಲಕ ಮಹಿಳೆಯರಿಗೆ ಮುಟ್ಟಿನ ರಜೆಯ ಕಾನೂನು ಜಾರಿಗೆ ತರಲಾಗುವುದು</p>.<p>* ಮನೆಗೆಲಸದ ಕಾರ್ಮಿಕರ ಹಕ್ಕುಗಳು ಮತ್ತು ಕನಿಷ್ಠ ವೇತನ ರಕ್ಷಣೆಗೆ ‘ಏಕೀಕೃತ ರಾಷ್ಟ್ರೀಯ ಕಾನೂನು’ ಜಾರಿಗೊಳಿಸಲಾಗುವುದು. ಮನೆಗೆಲಸದ ಕಾರ್ಮಿಕರ ಉದ್ಯೋಗ ಕಾಯಂ, ಅವರ ಸಾಮಾಜಿಕ ಭದ್ರತೆ ಖಾತ್ರಿಗೆ ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲು ತ್ರಿಪಕ್ಷೀಯ ಸಮಿತಿ ರಚಿಸಲಾಗುವುದು</p>.<p>* ಸಣ್ಣ ಉದ್ಯಮಗಳಲ್ಲಿ ತೊಡಗಿರುವ ಮಹಿಳೆಯರಿಗೆ, ಪ್ರಸ್ತುತ ಇರುವ ಶೇ 30 ಬಂಡವಾಳ ಸಬ್ಸಿಡಿಯನ್ನು ಶೇ 35ಕ್ಕೆ ಹೆಚ್ಚಿಸಲಾಗುವುದು</p>.<p>* ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ಗಳು ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಚಲಾಯಿಸುವ ತರಬೇತಿ, ಮಣ್ಣಿನ ಆರೋಗ್ಯ, ಬೀಜ ಉತ್ಪಾದನೆ ಮತ್ತು ಬೀಜ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುವುದು </p>.<p>*ರೈತ ಮಹಿಳೆಯರಿಗೆ ನೇರ ಮಾರುಕಟ್ಟೆ ಪ್ರವೇಶ ಅವಕಾಶ ನೀಡಲು ಮಹಿಳೆಯರಿಂದಲೇ ನಿರ್ವಹಿಸಲ್ಪಡುವ ಕೃಷಿ ಉತ್ಪನ್ನಗಳ ಖರೀದಿ ಮತ್ತು ಮಾರಾಟದ ಮಾರುಕಟ್ಟೆಗಳನ್ನು ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲಾಗುವುದು</p>.<p>* ಶಾಲೆಯಿಂದ ಹೊರಗಿರುವ ಮಕ್ಕಳನ್ನು ಗುರುತಿಸಿ ಅವರ ಮುಂದಿನ ಶಿಕ್ಷಣಕ್ಕೆ ಹಾಗೂ ಅವರ ಕುಟುಂಬಗಳಿಗೆ ಅಗತ್ಯ ಆರ್ಥಿಕ ಅವಕಾಶಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು </p>.<p>* ಕೆಲಸ, ಮದುವೆ, ಲೈಂಗಿಕ ಶೋಷಣೆ ಮತ್ತು ಅಂಗಾಂಗ ಮಾರಾಟಕ್ಕೆ ಮಕ್ಕಳ ಕಳ್ಳಸಾಗಣೆ ಆಗುವುದನ್ನು ತಡೆಯಲು ಪ್ರತ್ಯೇಕ ಕಾನೂನು ಜಾರಿ ಮತ್ತು ಸೂಕ್ತ ತನಿಖಾ ವ್ಯವಸ್ಥೆ ಜಾರಿಗೆ ತರಲಾಗುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ರಾಜ್ಯದಲ್ಲಿಯೂ ಎಲ್ಲ ಮಹಿಳೆಯರಿಗೆ ತಿಂಗಳಿಗೆ ₹1 ಸಾವಿರ ನೀಡಲಾಗುವುದು. ಅಲ್ಲದೆ, ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿಯನ್ನು ತಕ್ಷಣವೇ ಅನುಷ್ಠಾನಗೊಳಿಸಲಾಗುವುದು ಎಂದು ಡಿಎಂಕೆ ಭರವಸೆ ನೀಡಿದೆ.</p>.<p>‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಾಲುದಾರ ಹಾಗೂ ತಮಿಳುನಾಡಿನ ಆಡಳಿತರೂಢ ಪಕ್ಷವಾದ ಡಿಎಂಕೆ, ಬುಧವಾರ ಬಿಡುಗಡೆ ಮಾಡಿದ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ಆಶ್ವಾಸನೆ ನೀಡಿದೆ.</p>.<p>ಸಾಮಾಜಿಕ ನ್ಯಾಯದ ಆಧಾರದ ಮೇಲೆ ಶಿಕ್ಷಣ ಮತ್ತು ಉದ್ಯೋಗದಲ್ಲೂ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವುದಾಗಿಯೂ ಹೇಳಿದೆ. </p>.<p>ಎನ್ಡಿಎ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಪಡಿಸಲಾಗುವುದು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಮಾಡುವ ಜತೆಗೆ ಅಲ್ಲಿ ಚುನಾವಣೆ ನಡೆಸಲಾಗುವುದು ಎಂದೂ ಹೇಳಿದೆ.</p>.<p>ಅಲ್ಲದೆ, ಹೊಸ ಶಿಕ್ಷಣ ನೀತಿ 2020 ರದ್ದತಿ, ಇಂಧನ ಬೆಲೆ ಕಡಿತ, ಕಾನೂನು ಕ್ರಮದಿಂದ ರಾಜ್ಯಪಾಲರಿಗೆ ರಕ್ಷಣೆ ನೀಡುವ ಸಂವಿಧಾನದ 361ನೇ ವಿಧಿ ರದ್ದು ಮತ್ತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ರಾಜ್ಯಪಾಲರ ನೇಮಕಕ್ಕೆ ಕ್ರಮ ತೆಗೆದುಕೊಳ್ಳುವುದಾಗಿಯೂ ಪ್ರಕಟಿಸಿದೆ.</p>.<p>ಎಂ.ಎಸ್. ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕೆ ತರಲಾಗುವುದು. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಖಾತ್ರಿಗೆ ಕ್ರಮ ವಹಿಸಲಾಗುವುದು. ಅಲ್ಲದೆ, ಅಗ್ನಿಪಥ್ ಯೋಜನೆ ಕೈಬಿಟ್ಟು, ಸೇನಾ ಸಶಸ್ತ್ರ ಪಡೆಗಳಲ್ಲಿ ಶಾಶ್ವತ ನೇಮಕಾತಿಯನ್ನು ಪುನಃ ಆರಂಭಿಸುವುದಾಗಿಯೂ ಹೇಳಿದೆ.</p>.<p>ಜಾತಿವಾರು ಜನಗಣತಿ ಮತ್ತು ಬಡತನ ರೇಖೆಗಿಂತ ಕೆಳಗಿರುವವರ ಆರ್ಥಿಕ ಸಮೀಕ್ಷೆ ಸೇರಿದಂತೆ ಜನಗಣತಿಯನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ನಡೆಸುವುದಾಗಿಯೂ ಪ್ರಕಟಿಸಿದೆ.</p>.<p><strong>ಪ್ರಣಾಳಿಕೆಯಲ್ಲಿರುವ ಪ್ರಮುಖ ಭರವಸೆಗಳು</strong></p>.<p>* ಪೆಟ್ರೋಲ್ ಲೀಟರ್ಗೆ ₹75, ಡೀಸೆಲ್ಗೆ ₹65 ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹500ಕ್ಕೆ ನಿಗದಿಪಡಿಸಲಾಗುವುದು</p>.<p>* ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಲಕ್ಷದವರೆಗೆ ಬಡ್ಡಿ ರಹಿತ ಸಾಲ; ದೇಶದಾದ್ಯಂತ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ವಾಹನ ಸಾಲ</p>.<p>* ಲಿಂಗ ಸಮಾನತೆಗೆ ಒತ್ತು ನೀಡುವ ನೀಡುವ ಮೂಲಕ ಮಹಿಳೆಯರಿಗೆ ಮುಟ್ಟಿನ ರಜೆಯ ಕಾನೂನು ಜಾರಿಗೆ ತರಲಾಗುವುದು</p>.<p>* ಮನೆಗೆಲಸದ ಕಾರ್ಮಿಕರ ಹಕ್ಕುಗಳು ಮತ್ತು ಕನಿಷ್ಠ ವೇತನ ರಕ್ಷಣೆಗೆ ‘ಏಕೀಕೃತ ರಾಷ್ಟ್ರೀಯ ಕಾನೂನು’ ಜಾರಿಗೊಳಿಸಲಾಗುವುದು. ಮನೆಗೆಲಸದ ಕಾರ್ಮಿಕರ ಉದ್ಯೋಗ ಕಾಯಂ, ಅವರ ಸಾಮಾಜಿಕ ಭದ್ರತೆ ಖಾತ್ರಿಗೆ ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲು ತ್ರಿಪಕ್ಷೀಯ ಸಮಿತಿ ರಚಿಸಲಾಗುವುದು</p>.<p>* ಸಣ್ಣ ಉದ್ಯಮಗಳಲ್ಲಿ ತೊಡಗಿರುವ ಮಹಿಳೆಯರಿಗೆ, ಪ್ರಸ್ತುತ ಇರುವ ಶೇ 30 ಬಂಡವಾಳ ಸಬ್ಸಿಡಿಯನ್ನು ಶೇ 35ಕ್ಕೆ ಹೆಚ್ಚಿಸಲಾಗುವುದು</p>.<p>* ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ಗಳು ಮತ್ತು ಇತರ ಕೃಷಿ ಯಂತ್ರೋಪಕರಣಗಳನ್ನು ಚಲಾಯಿಸುವ ತರಬೇತಿ, ಮಣ್ಣಿನ ಆರೋಗ್ಯ, ಬೀಜ ಉತ್ಪಾದನೆ ಮತ್ತು ಬೀಜ ತಂತ್ರಜ್ಞಾನದ ಕುರಿತು ರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುವುದು </p>.<p>*ರೈತ ಮಹಿಳೆಯರಿಗೆ ನೇರ ಮಾರುಕಟ್ಟೆ ಪ್ರವೇಶ ಅವಕಾಶ ನೀಡಲು ಮಹಿಳೆಯರಿಂದಲೇ ನಿರ್ವಹಿಸಲ್ಪಡುವ ಕೃಷಿ ಉತ್ಪನ್ನಗಳ ಖರೀದಿ ಮತ್ತು ಮಾರಾಟದ ಮಾರುಕಟ್ಟೆಗಳನ್ನು ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲಾಗುವುದು</p>.<p>* ಶಾಲೆಯಿಂದ ಹೊರಗಿರುವ ಮಕ್ಕಳನ್ನು ಗುರುತಿಸಿ ಅವರ ಮುಂದಿನ ಶಿಕ್ಷಣಕ್ಕೆ ಹಾಗೂ ಅವರ ಕುಟುಂಬಗಳಿಗೆ ಅಗತ್ಯ ಆರ್ಥಿಕ ಅವಕಾಶಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು </p>.<p>* ಕೆಲಸ, ಮದುವೆ, ಲೈಂಗಿಕ ಶೋಷಣೆ ಮತ್ತು ಅಂಗಾಂಗ ಮಾರಾಟಕ್ಕೆ ಮಕ್ಕಳ ಕಳ್ಳಸಾಗಣೆ ಆಗುವುದನ್ನು ತಡೆಯಲು ಪ್ರತ್ಯೇಕ ಕಾನೂನು ಜಾರಿ ಮತ್ತು ಸೂಕ್ತ ತನಿಖಾ ವ್ಯವಸ್ಥೆ ಜಾರಿಗೆ ತರಲಾಗುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>