<p><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ‘ಅನುಚಿತ, ವಿವೇಚನೆ ಇಲ್ಲದ ಹಾಗೂ ಅಗೌರವ’ದ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p><p>ಮೇ 20ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಆಯೋಗ ಸೂಚಿಸಿದೆ. </p><p>ಕಲ್ಕತ್ತ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು ತಮ್ಲುಕ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಮೇ 25ರಂದು ಈ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.</p><p>ಪ್ರಸಕ್ತ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಮಹಿಳೆಯರ ಕುರಿತು ಅಗೌರವದ ಹೇಳಿಕೆಗಳನ್ನು ನೀಡಿರುವುದಕ್ಕೆ ಸಂಬಂಧಿಸಿ ಗಂಗೋಪಾಧ್ಯಾಯ ಅವರು ಚುನಾವಣಾ ಆಯೋಗದಿಂದ ನೋಟಿಸ್ ಪಡೆದ ನಾಲ್ಕನೇ ರಾಜಕಾರಣಿ ಆಗಿದ್ದಾರೆ.</p><p>ಈ ಮೊದಲು, ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್ನ ಸುಪ್ರಿಯಾ ಶ್ರೀನೇತ್ ಅವರಿಗೆ ನೋಟಿಸ್ ನೀಡಲಾಗಿತ್ತು. ಇವರು ಕ್ರಮವಾಗಿ ಮಮತಾ ಬ್ಯಾನರ್ಜಿ ಹಾಗೂ ಕಂಗನಾ ರನೌತ್ ವಿರುದ್ಧ ನೀಡಿದ್ದ ಹೇಳಿಕೆಗಾಗಿ ನೋಟಿಸ್ ನೀಡಲಾಗಿತ್ತು.</p><p>ಬಿಜೆಪಿ ಅಭ್ಯರ್ಥಿ ಹೇಮಾಮಾಲಿನಿ ಕುರಿತ ಹೇಳಿಕೆಗೆ ಸಂಬಂಧಿಸಿ, ಕಾಂಗ್ರೆಸ್ನ ರಣದೀಪ್ ಸುರ್ಜೇವಾಲಾ ಅವರಿಗೆ ನೋಟಿಸ್ ನೀಡಿದ್ದ ಆಯೋಗ, ಅವರು 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ‘ಅನುಚಿತ, ವಿವೇಚನೆ ಇಲ್ಲದ ಹಾಗೂ ಅಗೌರವ’ದ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p><p>ಮೇ 20ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆಯೂ ಆಯೋಗ ಸೂಚಿಸಿದೆ. </p><p>ಕಲ್ಕತ್ತ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು ತಮ್ಲುಕ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಮೇ 25ರಂದು ಈ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.</p><p>ಪ್ರಸಕ್ತ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಮಹಿಳೆಯರ ಕುರಿತು ಅಗೌರವದ ಹೇಳಿಕೆಗಳನ್ನು ನೀಡಿರುವುದಕ್ಕೆ ಸಂಬಂಧಿಸಿ ಗಂಗೋಪಾಧ್ಯಾಯ ಅವರು ಚುನಾವಣಾ ಆಯೋಗದಿಂದ ನೋಟಿಸ್ ಪಡೆದ ನಾಲ್ಕನೇ ರಾಜಕಾರಣಿ ಆಗಿದ್ದಾರೆ.</p><p>ಈ ಮೊದಲು, ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್ನ ಸುಪ್ರಿಯಾ ಶ್ರೀನೇತ್ ಅವರಿಗೆ ನೋಟಿಸ್ ನೀಡಲಾಗಿತ್ತು. ಇವರು ಕ್ರಮವಾಗಿ ಮಮತಾ ಬ್ಯಾನರ್ಜಿ ಹಾಗೂ ಕಂಗನಾ ರನೌತ್ ವಿರುದ್ಧ ನೀಡಿದ್ದ ಹೇಳಿಕೆಗಾಗಿ ನೋಟಿಸ್ ನೀಡಲಾಗಿತ್ತು.</p><p>ಬಿಜೆಪಿ ಅಭ್ಯರ್ಥಿ ಹೇಮಾಮಾಲಿನಿ ಕುರಿತ ಹೇಳಿಕೆಗೆ ಸಂಬಂಧಿಸಿ, ಕಾಂಗ್ರೆಸ್ನ ರಣದೀಪ್ ಸುರ್ಜೇವಾಲಾ ಅವರಿಗೆ ನೋಟಿಸ್ ನೀಡಿದ್ದ ಆಯೋಗ, ಅವರು 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>