‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಭಿಷೇಕ್ ಬ್ಯಾನರ್ಜಿ ಅವರ ಹೆಲಿಕಾಪ್ಟರ್ಅನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಹಣ ಮತ್ತು ಚಿನ್ನ ಇರುವುದಾಗಿ ಖಚಿತ ಮಾಹಿತಿ ಲಭಿಸಿದ ಕಾರಣ ತಪಾಸಣೆ ನಡೆಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ನಾವು ಅಂತಹ ಕೃತ್ಯದಲ್ಲಿ ತೊಡಗುವುದಿಲ್ಲ’ ಎಂದು ಮಮತಾ ಹೇಳಿದ್ದಾರೆ.