<p><strong>ಪಟ್ನಾ</strong>: ಬಿಹಾರದ ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫತ್ಮಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಆರ್ಜೆಡಿಗೆ ಮರಳುವ ಸಾಧ್ಯತೆ ಎಂದು ವರದಿ ತಿಳಿಸಿದೆ.</p><p>ನನ್ನ ನೈತಿಕ ಮೌಲ್ಯಗಳನ್ನು ರಕ್ಷಿಸಿಕೊಳ್ಳುವ ಉದ್ದೇಶದಿಂದ ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕೈಬರಹದಲ್ಲಿ ಬರೆದ ಪತ್ರದಲ್ಲಿ ಮೊಹಮ್ಮದ್ ತಿಳಿಸಿದ್ದಾರೆ.</p><p>‘ನಾನು ಜೆಡಿಯು ತೊರೆದಿದ್ದೇನೆ. ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಮೂರ್ನಾಲ್ಕು ದಿನಗಳಲ್ಲಿ ನಿಮಗೆ ತಿಳಿಯಲಿದೆ’ ಎಂದು ಅವರು ಪಿಟಿಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.</p><p>ಬಿಹಾರದಲ್ಲಿ ಎನ್ಡಿಎ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಆಗಿದೆ. ಫತ್ಮಿ 4 ಬಾರಿ ಗೆದ್ದಿದ್ದ ದರ್ಭಾಂಗ ಕ್ಷೇತ್ರ ಸೇರಿ 17 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟು ಕೊಡಲಾಗಿದೆ. ಇದರಿಂದ, ಫತ್ಮಿ ತೀವ್ರ ಅಸಮಾಧಾನಗೊಂಡಿದ್ದಾರೆ. </p><p>ಯುಪಿಎ–1ರ ಅವಧಿಯಲ್ಲಿ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದ ಫತ್ಮಿ, 2019ರಲ್ಲಿ ದರ್ಭಾಂಗ ಕ್ಷೇತ್ರದಲ್ಲಿ ಮತ್ತೊಬ್ಬ ಮುಸ್ಲಿಂ ನಾಯಕ ಅಬ್ದುಲ್ ಸಿದ್ಧಿಕಿಯನ್ನು ಕಣಕ್ಕಿಳಿಸಿದ ಬಳಿಕ ಆರ್ಜೆಡಿ ವಿರುದ್ಧ ಸಿಡಿದು ಪಕ್ಷ ತೊರೆದಿದ್ದರು. </p><p>ಫತ್ಮಿ ಮಗ ಫರಾಜ್ ಸಹ ಜೆಡಿಯು ಶಾಸಕರಾಗಿದ್ದು, ಇಬ್ಬರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಮುಸ್ಲಿಂ ಮತಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಆರ್ಜೆಡಿ ಇದೆ ಎಂದು ವರದಿಗಳು ತಿಳಿಸಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಜೆಡಿಯು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫತ್ಮಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಆರ್ಜೆಡಿಗೆ ಮರಳುವ ಸಾಧ್ಯತೆ ಎಂದು ವರದಿ ತಿಳಿಸಿದೆ.</p><p>ನನ್ನ ನೈತಿಕ ಮೌಲ್ಯಗಳನ್ನು ರಕ್ಷಿಸಿಕೊಳ್ಳುವ ಉದ್ದೇಶದಿಂದ ಪಕ್ಷದ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕೈಬರಹದಲ್ಲಿ ಬರೆದ ಪತ್ರದಲ್ಲಿ ಮೊಹಮ್ಮದ್ ತಿಳಿಸಿದ್ದಾರೆ.</p><p>‘ನಾನು ಜೆಡಿಯು ತೊರೆದಿದ್ದೇನೆ. ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ಮೂರ್ನಾಲ್ಕು ದಿನಗಳಲ್ಲಿ ನಿಮಗೆ ತಿಳಿಯಲಿದೆ’ ಎಂದು ಅವರು ಪಿಟಿಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.</p><p>ಬಿಹಾರದಲ್ಲಿ ಎನ್ಡಿಎ ಸೀಟು ಹಂಚಿಕೆ ಸೂತ್ರವನ್ನು ಘೋಷಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಆಗಿದೆ. ಫತ್ಮಿ 4 ಬಾರಿ ಗೆದ್ದಿದ್ದ ದರ್ಭಾಂಗ ಕ್ಷೇತ್ರ ಸೇರಿ 17 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟು ಕೊಡಲಾಗಿದೆ. ಇದರಿಂದ, ಫತ್ಮಿ ತೀವ್ರ ಅಸಮಾಧಾನಗೊಂಡಿದ್ದಾರೆ. </p><p>ಯುಪಿಎ–1ರ ಅವಧಿಯಲ್ಲಿ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದ ಫತ್ಮಿ, 2019ರಲ್ಲಿ ದರ್ಭಾಂಗ ಕ್ಷೇತ್ರದಲ್ಲಿ ಮತ್ತೊಬ್ಬ ಮುಸ್ಲಿಂ ನಾಯಕ ಅಬ್ದುಲ್ ಸಿದ್ಧಿಕಿಯನ್ನು ಕಣಕ್ಕಿಳಿಸಿದ ಬಳಿಕ ಆರ್ಜೆಡಿ ವಿರುದ್ಧ ಸಿಡಿದು ಪಕ್ಷ ತೊರೆದಿದ್ದರು. </p><p>ಫತ್ಮಿ ಮಗ ಫರಾಜ್ ಸಹ ಜೆಡಿಯು ಶಾಸಕರಾಗಿದ್ದು, ಇಬ್ಬರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಮುಸ್ಲಿಂ ಮತಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಆರ್ಜೆಡಿ ಇದೆ ಎಂದು ವರದಿಗಳು ತಿಳಿಸಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>