‘ರಾಮಮಂದಿರ ವಿಷಯವನ್ನು ಚುನಾವಣೆಗೆ ಬಳಸುತ್ತಿರುವ ನರೇಂದ್ರ ಮೋದಿ ಕಾಂಗ್ರೆಸ್ಗೆ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿದ್ದಾರೆ. ಒಂದು ವೇಳೆ ಅವರು ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವವರಾಗಿದ್ದರೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ರಾಮ ಮಂದಿರ ಉದ್ಘಾಟನೆಗೆ ಏಕೆ ಕರೆಯಲಿಲ್ಲ? ಸಾಂವಿಧಾನಿಕವಾಗಿ ನಿಮಗಿಂತ ದೊಡ್ಡ ಸ್ಥಾನದಲ್ಲಿದ್ದ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದವರೆಂಬ ತಾರತಮ್ಯದಿಂದ ಕರೆಯಲಿಲ್ಲವೇ ಎಂಬ ಪ್ರಶ್ನೆಗೆ ಮೊದಲು ಉತ್ತರಿಸಿ. ನಂತರ ನಾನು ಯಾಕೆ ಬರಲಿಲ್ಲ ಎಂಬುದನ್ನು ಹೇಳುತ್ತೇನೆ’ ಎಂದರು.