ಪಕ್ಷದ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ‘ಪಂಜಾಬ್ನಲ್ಲಿ ಕಾಂಗ್ರೆಸ್ ಎಎಪಿಯೊಂದಿಗೆ ಸಂಘರ್ಷಕ್ಕಿಳಿಯುವ ಮೂಲಕ ಮತ್ತು ಜೂನ್ 1ರಂದು ನಡೆಯುತ್ತಿರುವ ಕೂಟದ ಸಭೆಗೆ ಮಮತಾ ಬ್ಯಾನರ್ಜಿ ಗೈರಾಗುವ ಮೂಲಕ ‘ಇಂಡಿಯಾ’ ಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿವೆ. ಹೀಗಾಗಿ ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಜನ ಯಾರಿಗೆ ಮತ ಹಾಕಬೇಕು ಎನ್ನುವ ಬಗ್ಗೆ ಚಿಂತಿಸಬೇಕಿದೆ’ ಎಂದು ತಿಳಿಸಿದರು.