ವಿಚಾರಣೆಗೆ ಹಾಜರಾದ ರೇವಂತ್ ರೆಡ್ಡಿ ಪರ ವಕೀಲರು
ನವದೆಹಲಿ: ಅಮಿತ್ ಶಾ ಅವರ ಹೇಳಿಕೆಯ ತಿರುಚಿದ ವಿಡಿಯೊ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಎದುರು ಹಾಜರಾದರು.
ರೇವಂತ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಿಆರ್ಪಿಸಿ ಸೆಕ್ಷನ್ 160/91ನ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದರು.
‘ವಿಡಿಯೊ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಖಾತೆಯು ರೇವಂತ ರೆಡ್ಡಿ ಅವರಿಗೆ ಸಂಬಂಧಿಸಿದ್ದಲ್ಲ’ ಎಂದು ವಕೀಲೆ ಸೌಮ್ಯಾ ಗುಪ್ತಾ ಮಾಧ್ಯಮಗಳಿಗೆ ತಿಳಿಸಿದರು.