ಹೈದರಾಬಾದ್: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಬಾಂಡ್ ಯೋಜನೆಯು ಜಗತ್ತಿನ ಅತಿ ದೊಡ್ಡ ಹಗರಣವಾಗಿದೆ ಎಂದು ಶನಿವಾರ ಆರೋಪಿಸಿದರು.
ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಆಯೋಗದಲ್ಲಿ ‘ತಮ್ಮ’ ವ್ಯಕ್ತಿಗಳನ್ನು ಇಟ್ಟಿದ್ದಾರೆ ಎಂದು ಆರೋಪಿಸಿದರು.
ಶ್ರೀಮಂತರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಬಡವರ ಒಂದು ರೂಪಾಯಿ ಸಾಲವನ್ನೂ ಮನ್ನಾ ಮಾಡಲಿಲ್ಲ ಎಂದು ಹೇಳಿದರು.