ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video|ಮಹಾಪ್ರಭು ಮೊಗದಲ್ಲಿ ಆತಂಕ ಗೋಚರ: ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ದಾಳಿ

Published 14 ಏಪ್ರಿಲ್ 2024, 12:48 IST
Last Updated 14 ಏಪ್ರಿಲ್ 2024, 12:48 IST
ಅಕ್ಷರ ಗಾತ್ರ

‘ನಾನು ಬಲಶಾಲಿ ಅಲ್ಲ, ತುಂಬಾ ಬಲಹೀನ ಆಗುತ್ತಿದ್ದೇನೆ ಎನ್ನುವುದು ಗೊತ್ತಾಗಿರುವುದರಿಂದಲೇ ಮಹಾಪ್ರಭುವಿನ ಮುಖದಲ್ಲಿ ಆತಂಕ ಗೋಚರಿಸುತ್ತಿದೆ’ ಎಂದು ಚಿತ್ರ ನಟ ಪ್ರಕಾಶ್‌ ರಾಜ್ ಟೀಕಿಸಿದರು. ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಅಂಗವಾಗಿ ‘ಭಾರತ- ಸಂವಿಧಾನ-ಪ್ರಜಾಪ್ರಭುತ್ವದ ಉಳಿವಿಗಾಗಿ’ ಘೋಷವಾಕ್ಯದಡಿ ದಲಿತ ಸಂಘರ್ಷ ಸಮಿತಿಯಿಂದ ಮೈಸೂರಿನ ಎಂ.ಜಿ. ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘400 ಸ್ಥಾನ ಗಳಿಸುತ್ತೇವೆ ಎನ್ನುತ್ತಾರೆ. ಅದು ಅವರ ನಂಬಿಕೆ ಅಲ್ಲ, ಭಯ. ತುಂಬಾ ವಿಶ್ವಾಸದಿಂದ ಮಾತನಾಡಿದಾಗ, ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಿದಾಗ, ಇಡಿಯಿಂದ ದಾಳಿ ಮಾಡಿಸಿದಾಗ ಅವರು ಹೆದರಿದ್ದಾರೆ ಎನ್ನುವುದು ಗೊತ್ತಾಗುತ್ತದೆ’ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT