<p><strong>ನವದೆಹಲಿ</strong>: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿರುವ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಒಟ್ಟು 1,198 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.</p> <p>ಕಣದಲ್ಲಿರುವ ಪ್ರತಿ ಏಳು ಅಭ್ಯರ್ಥಿಗಳಲ್ಲಿ ಒಬ್ಬರು ಗಂಭೀರ ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ. ಪ್ರತಿ ಮೂವರಲ್ಲಿ ಒಬ್ಬರು ಕೋಟ್ಯಧಿಪತಿ ಆಗಿದ್ದಾರೆ ಎಂಬುದನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ಹೇಳಿದೆ.</p> <p>ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಮಾಹಿತಿಯನ್ನು ವರದಿ ಒಳಗೊಂಡಿದೆ. 167 ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಮೂವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. </p> <p>ಕಣದಲ್ಲಿರುವ ಶ್ರೀಮಂತ ಅಭ್ಯರ್ಥಿಗಳಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಕರ್ನಾಟಕದವರೇ ಇದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಶ್ರೀಮಂತ ಅಭ್ಯರ್ಥಿ ಎನಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.</p><p>ಎರಡನೇ ಹಂತದ ಮತದಾನ ಏ.26 ರಂದು ನಡೆಯಲಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿರುವ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಒಟ್ಟು 1,198 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.</p> <p>ಕಣದಲ್ಲಿರುವ ಪ್ರತಿ ಏಳು ಅಭ್ಯರ್ಥಿಗಳಲ್ಲಿ ಒಬ್ಬರು ಗಂಭೀರ ಕ್ರಿಮಿನಲ್ ಪ್ರಕರಣ ಹೊಂದಿದ್ದಾರೆ. ಪ್ರತಿ ಮೂವರಲ್ಲಿ ಒಬ್ಬರು ಕೋಟ್ಯಧಿಪತಿ ಆಗಿದ್ದಾರೆ ಎಂಬುದನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮಂಗಳವಾರ ಪ್ರಕಟಿಸಿದ ವರದಿಯಲ್ಲಿ ಹೇಳಿದೆ.</p> <p>ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಮಾಹಿತಿಯನ್ನು ವರದಿ ಒಳಗೊಂಡಿದೆ. 167 ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಮೂವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. </p> <p>ಕಣದಲ್ಲಿರುವ ಶ್ರೀಮಂತ ಅಭ್ಯರ್ಥಿಗಳಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಕರ್ನಾಟಕದವರೇ ಇದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಶ್ರೀಮಂತ ಅಭ್ಯರ್ಥಿ ಎನಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.</p><p>ಎರಡನೇ ಹಂತದ ಮತದಾನ ಏ.26 ರಂದು ನಡೆಯಲಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>