<p><strong>ನಾಗಪುರ</strong>: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಮಗ, ಹಾಲಿ ಸಂಸದರೂ ಆಗಿರುವ ಶ್ರೀಕಾಂತ್ ಶಿಂದೆ ಅವರು ಕಲ್ಯಾಣ್ ಲೋಕಸಭಾ ಕ್ಷೇತ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಯಲಿದ್ದಾರೆ.</p><p>ಕಲ್ಯಾಣ್ ಮತ್ತು ಠಾಣೆ ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ಪಟ್ಟುಹಿಡಿದಿತ್ತು. ಇದು ‘ಮಹಾಯುತಿ’ ಮೈತ್ರಿಯಲ್ಲಿ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದರೆ, ಈ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ಶಿವಸೇನಾ ಯಶಸ್ವಿಯಾಗಿದೆ.</p><p>ವೃತ್ತಿಯಲ್ಲಿ ವೈದ್ಯರಾಗಿರುವ ಶ್ರೀಕಾಂತ್ ಅವರು ಶಿವಸೇನಾದ (ಯುಬಿಟಿ) ವೈಶಾಲಿ ದರೇಕರ್ ರಾಣೆ ಅವರನ್ನು ಎದುರಿಸಲಿದ್ದಾರೆ. ಶ್ರೀಕಾಂತ್, 2014 ಮತ್ತು 2019 ರಲ್ಲಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.</p><p>ಶ್ರೀಕಾಂತ್ ಅವರನ್ನು ಕಣಕ್ಕಿಳಿಸುವುದಕ್ಕೆ ಕಲ್ಯಾಣ್ ಕ್ಷೇತ್ರದ ಬಿಜೆಪಿಯ ಕೆಲವು ನಾಯಕರು ಈಚೆಗೆ ವಿರೋಧ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡಣವೀಸ್ ಅವರೇ ಶ್ರೀಕಾಂತ್ ಹೆಸರು ಘೋಷಿಸಿದರು. </p><p> ‘ಶ್ರೀಕಾಂತ್ ಶಿಂದೆ ಅವರು ಕಲ್ಯಾಣ್ ಕ್ಷೇತ್ರದ ಮಹಾಯುತಿ ಅಭ್ಯರ್ಥಿಯಾಗಿದ್ದಾರೆ. ನಾವೆಲ್ಲರೂ ಅವರ ಜತೆಗಿದ್ದೇವೆ. ಅವರನ್ನು ಕಣಕ್ಕಿಳಿಸುವುದಕ್ಕೆ ಯಾವುದೇ ವಿರೋಧ ಇಲ್ಲ. ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವುದು ನಮ್ಮ ಗುರಿ’ ಎಂದು ಫಡಣವೀಸ್ ಅವರು ನಾಗಪುರದಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ</strong>: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಮಗ, ಹಾಲಿ ಸಂಸದರೂ ಆಗಿರುವ ಶ್ರೀಕಾಂತ್ ಶಿಂದೆ ಅವರು ಕಲ್ಯಾಣ್ ಲೋಕಸಭಾ ಕ್ಷೇತ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಯಲಿದ್ದಾರೆ.</p><p>ಕಲ್ಯಾಣ್ ಮತ್ತು ಠಾಣೆ ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ಪಟ್ಟುಹಿಡಿದಿತ್ತು. ಇದು ‘ಮಹಾಯುತಿ’ ಮೈತ್ರಿಯಲ್ಲಿ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದರೆ, ಈ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ಶಿವಸೇನಾ ಯಶಸ್ವಿಯಾಗಿದೆ.</p><p>ವೃತ್ತಿಯಲ್ಲಿ ವೈದ್ಯರಾಗಿರುವ ಶ್ರೀಕಾಂತ್ ಅವರು ಶಿವಸೇನಾದ (ಯುಬಿಟಿ) ವೈಶಾಲಿ ದರೇಕರ್ ರಾಣೆ ಅವರನ್ನು ಎದುರಿಸಲಿದ್ದಾರೆ. ಶ್ರೀಕಾಂತ್, 2014 ಮತ್ತು 2019 ರಲ್ಲಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.</p><p>ಶ್ರೀಕಾಂತ್ ಅವರನ್ನು ಕಣಕ್ಕಿಳಿಸುವುದಕ್ಕೆ ಕಲ್ಯಾಣ್ ಕ್ಷೇತ್ರದ ಬಿಜೆಪಿಯ ಕೆಲವು ನಾಯಕರು ಈಚೆಗೆ ವಿರೋಧ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡಣವೀಸ್ ಅವರೇ ಶ್ರೀಕಾಂತ್ ಹೆಸರು ಘೋಷಿಸಿದರು. </p><p> ‘ಶ್ರೀಕಾಂತ್ ಶಿಂದೆ ಅವರು ಕಲ್ಯಾಣ್ ಕ್ಷೇತ್ರದ ಮಹಾಯುತಿ ಅಭ್ಯರ್ಥಿಯಾಗಿದ್ದಾರೆ. ನಾವೆಲ್ಲರೂ ಅವರ ಜತೆಗಿದ್ದೇವೆ. ಅವರನ್ನು ಕಣಕ್ಕಿಳಿಸುವುದಕ್ಕೆ ಯಾವುದೇ ವಿರೋಧ ಇಲ್ಲ. ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವುದು ನಮ್ಮ ಗುರಿ’ ಎಂದು ಫಡಣವೀಸ್ ಅವರು ನಾಗಪುರದಲ್ಲಿ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>