<p><strong>ನವದೆಹಲಿ:</strong> 'ಅಸುರ ಶಕ್ತಿ'ಯ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪುನರುಚ್ಚರಿಸಿದ್ದಾರೆ.</p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದ್ವೇಷದಿಂದ ತುಂಬಿದ ಅಸುರ ಶಕ್ತಿ' ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. </p><p>ರಾಹುಲ್ ಗಾಂಧಿ ಅವರ 'ಶಕ್ತಿ' ಹೇಳಿಕೆಯು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು. 'ಭಾರತ ಜೋಡೊ ನ್ಯಾಯ ಯಾತ್ರೆ' ಸಮಾರೋಪ ಸಭೆಯಲ್ಲಿ ನಾವು 'ಶಕ್ತಿ' ವಿರುದ್ಧ ಹೋರಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. </p><p>ಇದರ ವಿರುದ್ಧ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದರು. ಪ್ರತಿಯೊಬ್ಬ ತಾಯಿ ಮತ್ತು ಹೆಣ್ಣು ಮಗಳು 'ಶಕ್ತಿ'ಯ ರೂಪ. ಅವರನ್ನು ನಾನು ಆರಾಧಿಸುತ್ತೇನೆ. ಅವರ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧವಿದ್ದೇನೆ ಎಂದು ಹೇಳಿದ್ದರು. </p><p>ಇಂಡಿಯಾ ಒಕ್ಕೂಟದ ಪ್ರಣಾಳಿಕೆಯು 'ಶಕ್ತಿ'ಯನ್ನು ನಾಶಗೊಳಿಸುವ ಕುರಿತು ಹೇಳಿದೆ ಎಂದು ಆರೋಪಿಸಿದ್ದ ಪ್ರಧಾನಿ, ಇದು ಶಕ್ತಿಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಣ ಹೋರಾಟ ಎಂದು ಹೇಳಿದ್ದರು. </p>.‘ಶಕ್ತಿ’ ನಾಶದ ಪ್ರಣಾಳಿಕೆ ಇಂಡಿಯಾ ಒಕ್ಕೂಟದವರದ್ದು: ಪ್ರಧಾನಿ ಮೋದಿ .ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆ: ಬಿಜೆಪಿಯಿಂದ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಅಸುರ ಶಕ್ತಿ'ಯ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪುನರುಚ್ಚರಿಸಿದ್ದಾರೆ.</p><p>ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದ್ವೇಷದಿಂದ ತುಂಬಿದ ಅಸುರ ಶಕ್ತಿ' ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. </p><p>ರಾಹುಲ್ ಗಾಂಧಿ ಅವರ 'ಶಕ್ತಿ' ಹೇಳಿಕೆಯು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿತ್ತು. 'ಭಾರತ ಜೋಡೊ ನ್ಯಾಯ ಯಾತ್ರೆ' ಸಮಾರೋಪ ಸಭೆಯಲ್ಲಿ ನಾವು 'ಶಕ್ತಿ' ವಿರುದ್ಧ ಹೋರಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. </p><p>ಇದರ ವಿರುದ್ಧ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದರು. ಪ್ರತಿಯೊಬ್ಬ ತಾಯಿ ಮತ್ತು ಹೆಣ್ಣು ಮಗಳು 'ಶಕ್ತಿ'ಯ ರೂಪ. ಅವರನ್ನು ನಾನು ಆರಾಧಿಸುತ್ತೇನೆ. ಅವರ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧವಿದ್ದೇನೆ ಎಂದು ಹೇಳಿದ್ದರು. </p><p>ಇಂಡಿಯಾ ಒಕ್ಕೂಟದ ಪ್ರಣಾಳಿಕೆಯು 'ಶಕ್ತಿ'ಯನ್ನು ನಾಶಗೊಳಿಸುವ ಕುರಿತು ಹೇಳಿದೆ ಎಂದು ಆರೋಪಿಸಿದ್ದ ಪ್ರಧಾನಿ, ಇದು ಶಕ್ತಿಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಣ ಹೋರಾಟ ಎಂದು ಹೇಳಿದ್ದರು. </p>.‘ಶಕ್ತಿ’ ನಾಶದ ಪ್ರಣಾಳಿಕೆ ಇಂಡಿಯಾ ಒಕ್ಕೂಟದವರದ್ದು: ಪ್ರಧಾನಿ ಮೋದಿ .ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆ: ಬಿಜೆಪಿಯಿಂದ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>