<p><strong>ನವದೆಹಲಿ</strong>: ಕಾಂಗ್ರೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 48 ಗಂಟೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.</p> <p>ಸಿರ್ಸಿಲ್ಲಾದಲ್ಲಿ ರಾವ್ ಅವರು ನೀಡಿದ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲದೆ. ಆಕ್ಷೇಪಾರ್ಹ ಮತ್ತು ಮಾನಹಾನಿಕರ ಹೇಳಿಕೆ ಮೂಲಕ ಆಯೋಗದ ಸೂಚನೆಗಳನ್ನೂ ಉಲ್ಲಂಘಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.</p><p>ಕೆಸಿಆರ್ ಮೇಲಿನ ಚುನಾವಣಾ ಆಯೋಗದ ನಿರ್ಬಂಧವು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬಂದಿದೆ.</p><p>ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಬಳಿಕ ಚುನಾವಣಾ ಪ್ರಚಾರ ನಿರ್ಬಂಧಕ್ಕೊಳಗಾದ 2ನೇ ನಾಯಕ ಕೆ. ಚಂದ್ರಶೇಖರ ರಾವ್ ಆಗಿದ್ದಾರೆ.</p><p>ಏಪ್ರಿಲ್ 5ರ ಸುದ್ದಿಗೋಷ್ಠಿಯಲ್ಲಿ ರಾವ್ ನೀಡಿದ ಹೇಳಿಕೆ ಕುರಿತಂತೆ ತೆಲಂಗಾಣ ಕಾಂಗ್ರೆಸ್ ಘಟಕದ ಹಿರಿಯ ಉಪಾಧ್ಯಕ್ಷ ಜಿ ನಿರಂಜನ್ ನೀಡಿದ ದೂರನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.</p><p>ರಾವ್ ಅವರು ಪಕ್ಷದ ಸ್ಟಾರ್ ಪ್ರಚಾರಕರು ಸಹ ಆಗಿದ್ದು, ಮಾದರಿ ನೀತಿ ಸಂಹಿತೆ ಪಾಲಿಸುವ ಮೂಲಕ ಇತರ ನಾಯಕರಿಗೆ ಮಾದರಿ ಆಗಬೇಕಿದೆ ಎಂದು ಆಯೋಗ ಹೇಳಿದೆ.</p><p>ರಾವ್ ಹೇಳಿಕೆಯನ್ನು ಬಲವಾಗಿ ಖಂಡಿಸಿರುವ ಆಯೋಗವು ಇಂದು ರಾತ್ರಿ 8 ಗಂಟೆಯಿಂದ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ರ್ಯಾಲಿಗಳು, ಕಾರ್ಯಕ್ರಮಗಳು, ಸಂದರ್ಶನ, ಮಾಧ್ಯಮಗಳಲ್ಲಿ ಮತದಾರರಿಗೆ ಮನವಿ ಸೇರಿದಂತೆ ಯಾವುದೇ ಚುನಾವಣೆ ಸಂಬಂಧಿತ ಚಟುವಟಿಕೆಯಲ್ಲಿ 48 ಗಂಟೆಗಳ ಕಾಲ ಭಾಗವಹಿಸುವಂತಿಲ್ಲ ಎಂದು ಹೇಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ(ಬಿಆರ್ಎಸ್) ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 48 ಗಂಟೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.</p> <p>ಸಿರ್ಸಿಲ್ಲಾದಲ್ಲಿ ರಾವ್ ಅವರು ನೀಡಿದ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲದೆ. ಆಕ್ಷೇಪಾರ್ಹ ಮತ್ತು ಮಾನಹಾನಿಕರ ಹೇಳಿಕೆ ಮೂಲಕ ಆಯೋಗದ ಸೂಚನೆಗಳನ್ನೂ ಉಲ್ಲಂಘಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.</p><p>ಕೆಸಿಆರ್ ಮೇಲಿನ ಚುನಾವಣಾ ಆಯೋಗದ ನಿರ್ಬಂಧವು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬಂದಿದೆ.</p><p>ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಬಳಿಕ ಚುನಾವಣಾ ಪ್ರಚಾರ ನಿರ್ಬಂಧಕ್ಕೊಳಗಾದ 2ನೇ ನಾಯಕ ಕೆ. ಚಂದ್ರಶೇಖರ ರಾವ್ ಆಗಿದ್ದಾರೆ.</p><p>ಏಪ್ರಿಲ್ 5ರ ಸುದ್ದಿಗೋಷ್ಠಿಯಲ್ಲಿ ರಾವ್ ನೀಡಿದ ಹೇಳಿಕೆ ಕುರಿತಂತೆ ತೆಲಂಗಾಣ ಕಾಂಗ್ರೆಸ್ ಘಟಕದ ಹಿರಿಯ ಉಪಾಧ್ಯಕ್ಷ ಜಿ ನಿರಂಜನ್ ನೀಡಿದ ದೂರನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.</p><p>ರಾವ್ ಅವರು ಪಕ್ಷದ ಸ್ಟಾರ್ ಪ್ರಚಾರಕರು ಸಹ ಆಗಿದ್ದು, ಮಾದರಿ ನೀತಿ ಸಂಹಿತೆ ಪಾಲಿಸುವ ಮೂಲಕ ಇತರ ನಾಯಕರಿಗೆ ಮಾದರಿ ಆಗಬೇಕಿದೆ ಎಂದು ಆಯೋಗ ಹೇಳಿದೆ.</p><p>ರಾವ್ ಹೇಳಿಕೆಯನ್ನು ಬಲವಾಗಿ ಖಂಡಿಸಿರುವ ಆಯೋಗವು ಇಂದು ರಾತ್ರಿ 8 ಗಂಟೆಯಿಂದ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ರ್ಯಾಲಿಗಳು, ಕಾರ್ಯಕ್ರಮಗಳು, ಸಂದರ್ಶನ, ಮಾಧ್ಯಮಗಳಲ್ಲಿ ಮತದಾರರಿಗೆ ಮನವಿ ಸೇರಿದಂತೆ ಯಾವುದೇ ಚುನಾವಣೆ ಸಂಬಂಧಿತ ಚಟುವಟಿಕೆಯಲ್ಲಿ 48 ಗಂಟೆಗಳ ಕಾಲ ಭಾಗವಹಿಸುವಂತಿಲ್ಲ ಎಂದು ಹೇಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>