ಠಾಣೆ: ಕಾಂಗ್ರೆಸ್ನ ಮಾಜಿ ನಾಯಕ ಸಂಜಯ್ ನಿರುಪಮ್ ಅವರು ಶುಕ್ರವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಸೇರಿದರು.
ನಿರುಪಮ್ ಅವರು 19 ವರ್ಷಗಳ ಹಿಂದೆ ಅವಿಭಜಿತ ಶಿವಸೇನಾ ತೊರೆದು ಕಾಂಗ್ರೆಸ್ ಸೇರಿದ್ದರು. ‘ಪಕ್ಷ ವಿರೋಧಿ ಚಟುವಟಿಕೆ’ ಕಾರಣ ನೀಡಿ ಕಳೆದ ತಿಂಗಳು ಅವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಲಾಗಿತ್ತು.
ನಿರುಪಮ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಶಿಂದೆ, ‘ಶಿವಸೇನಾದ ಉಪನಾಯಕ ಮತ್ತು ವಕ್ತಾರರಾಗಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಪ್ರಕಟಿಸಿದರು.