<p><strong>ಇಟಾನಗರ:</strong> ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯಲ್ಲಿ ಚುನಾವಣಾ ವಿಚಕ್ಷಣ ದಳದ ಸಿಬ್ಬಂದಿ ವಾಹನವೊಂದರಲ್ಲಿ ತುಂಬಿದ್ದ ₹1 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಗುರುವಾರ ಸಂಜೆ ಕನುಬರಿ ಚೆಕ್ ಗೇಟ್ ಬಳಿ ತಪಾಸಣೆ ನಡೆಸುವ ವೇಳೆ ವಾಹನವೊಂದರಲ್ಲಿ ಹಣ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಕೂಡಲೇ ವಾಹನ ಮತ್ತು ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. </p><p>ಹಣ ಪತ್ತೆಯಾಗಿರುವ ವಾಹನವು ಖಾಸಗಿ ನಿರ್ಮಾಣ ಕಂಪನಿಯ ನಿರ್ದೇಶಕ ಹರ್ಷವರ್ಧನ್ ಸಿಂಗ್ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಚುನಾವಣಾ ರ್ಯಾಲಿಗಾಗಿ ಲಾಂಗ್ಡಿಂಗ್ ಜಿಲ್ಲೆಗೆ ತೆರಳಿದ್ದ ಮೇಘಾಲಯ ಮುಖ್ಯಮಂತ್ರಿ ಕೋನ್ರಡ್ ಸಂಗ್ಮಾ ಅವರ ಬೆಂಗಾವಲು ಪಡೆಯನ್ನು ಈ ವಾಹನ ಹಿಂಬಾಲಿಸುತ್ತಿತ್ತು ಎಂದು ಹೇಳಲಾಗಿದೆ. </p><p>ಜಪ್ತಿ ಮಾಡಿರುವ ವಾಹನವು ಸಿಎಂ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ. ಆದರೆ, ಬೈಕ್ವೊಂದನ್ನು ಹಿಂಬಾಲಿಸುತ್ತಿತ್ತು ಎಂದು ಲಾಂಗ್ಡಿಂಗ್ ಎಸ್ಪಿ ಡೆಕಿಯೊ ಗುಮ್ಜಾ ಹೇಳಿದ್ದಾರೆ.</p><p>ನಗದು ವಶಪಡಿಸಿಕೊಂಡ ಬಗ್ಗೆ ಆದಾಯ ತೆರಿಗೆ ಇಲಾಖೆಗೆ (ಐ.ಟಿ) ಮಾಹಿತಿ ನೀಡಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಗುಮ್ಜಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಟಾನಗರ:</strong> ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯಲ್ಲಿ ಚುನಾವಣಾ ವಿಚಕ್ಷಣ ದಳದ ಸಿಬ್ಬಂದಿ ವಾಹನವೊಂದರಲ್ಲಿ ತುಂಬಿದ್ದ ₹1 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>ಗುರುವಾರ ಸಂಜೆ ಕನುಬರಿ ಚೆಕ್ ಗೇಟ್ ಬಳಿ ತಪಾಸಣೆ ನಡೆಸುವ ವೇಳೆ ವಾಹನವೊಂದರಲ್ಲಿ ಹಣ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಕೂಡಲೇ ವಾಹನ ಮತ್ತು ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. </p><p>ಹಣ ಪತ್ತೆಯಾಗಿರುವ ವಾಹನವು ಖಾಸಗಿ ನಿರ್ಮಾಣ ಕಂಪನಿಯ ನಿರ್ದೇಶಕ ಹರ್ಷವರ್ಧನ್ ಸಿಂಗ್ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಚುನಾವಣಾ ರ್ಯಾಲಿಗಾಗಿ ಲಾಂಗ್ಡಿಂಗ್ ಜಿಲ್ಲೆಗೆ ತೆರಳಿದ್ದ ಮೇಘಾಲಯ ಮುಖ್ಯಮಂತ್ರಿ ಕೋನ್ರಡ್ ಸಂಗ್ಮಾ ಅವರ ಬೆಂಗಾವಲು ಪಡೆಯನ್ನು ಈ ವಾಹನ ಹಿಂಬಾಲಿಸುತ್ತಿತ್ತು ಎಂದು ಹೇಳಲಾಗಿದೆ. </p><p>ಜಪ್ತಿ ಮಾಡಿರುವ ವಾಹನವು ಸಿಎಂ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ. ಆದರೆ, ಬೈಕ್ವೊಂದನ್ನು ಹಿಂಬಾಲಿಸುತ್ತಿತ್ತು ಎಂದು ಲಾಂಗ್ಡಿಂಗ್ ಎಸ್ಪಿ ಡೆಕಿಯೊ ಗುಮ್ಜಾ ಹೇಳಿದ್ದಾರೆ.</p><p>ನಗದು ವಶಪಡಿಸಿಕೊಂಡ ಬಗ್ಗೆ ಆದಾಯ ತೆರಿಗೆ ಇಲಾಖೆಗೆ (ಐ.ಟಿ) ಮಾಹಿತಿ ನೀಡಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಗುಮ್ಜಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>