<p><strong>ಅಮರಾವತಿ (ಆಂಧ್ರಪ್ರದೇಶ):</strong> ಮುಂಬರುವ ಲೋಕಸಭೆ ಚುನಾವಣೆಗೆ ಟಿಡಿಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇದರಲ್ಲಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ವೈಎಸ್ಆರ್ ಕಾಂಗ್ರೆಸ್ ಮಾಜಿ ಸಂಸದರೂ ಸೇರಿದ್ದಾರೆ.</p> <p>ಆಡಳಿತಾರೂಢ ವೈಎಸ್ಆರ್ಸಿಪಿಯಿಂದ ಹೊರಬಂದ ಎಂ.ಶ್ರೀನಿವಾಸುಲು ರೆಡ್ಡಿ ಅವರನ್ನು ಟಿಡಿಪಿ ಒಂಗೋಲ್ನಿಂದ ಕಣಕ್ಕಿಳಿಸಿದೆ. 2019ರಲ್ಲಿ ಇವರು ವೈಎಸ್ಆರ್ಸಿಪಿ ಟಿಕೆಟ್ನಲ್ಲಿ ಅದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.</p> <p>ವಿಜಯನಗರದಿಂದ ಕೆ. ಅಪ್ಪಲನಾಯ್ಡು, ಅನಂತಪುರದಿಂದ ಎ. ಲಕ್ಷ್ಮೀನಾರಾಯಣ ಮತ್ತು ಕಡಪದಿಂದ ಸಿ. ಭೂಪೇಶ್ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. </p> <p>ಈ ನಾಲ್ಕು ಹೆಸರುಗಳ ಘೋಷಣೆಯೊಂದಿಗೆ, ಟಿಡಿಪಿ 17 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಾರ್ವಜನಿಕ ಅಭಿಪ್ರಾಯ ಪಡೆದು ಟಿಡಿಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿತ್ತು . </p> <p>17 ಲೋಕಸಭಾ ಸ್ಥಾನಗಳಲ್ಲದೆ, ರಾಜ್ಯದಲ್ಲಿ ಮೇ 13 ರಂದು ಏಕಕಾಲದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿಗೆ 144 ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದೆ. ಒಪ್ಪಂದದ ಪ್ರಕಾರ, ನಟ ಪವನ್ ಕಲ್ಯಾಣ್ ಅವರ ಜನಸೇನಾ ಎರಡು ಲೋಕಸಭಾ ಕ್ಷೇತ್ರ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ .</p> <p>ಆಂಧ್ರಪ್ರದೇಶವು ಒಟ್ಟು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.</p> .Andhra: ಎನ್ಡಿಎ ಸೀಟು ಹಂಚಿಕೆ; ಬಿಜೆಪಿ 6, ಟಿಡಿಪಿ 17 ಸ್ಥಾನಗಳಲ್ಲಿ ಸ್ಪರ್ಧೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ (ಆಂಧ್ರಪ್ರದೇಶ):</strong> ಮುಂಬರುವ ಲೋಕಸಭೆ ಚುನಾವಣೆಗೆ ಟಿಡಿಪಿ ತನ್ನ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಇದರಲ್ಲಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ವೈಎಸ್ಆರ್ ಕಾಂಗ್ರೆಸ್ ಮಾಜಿ ಸಂಸದರೂ ಸೇರಿದ್ದಾರೆ.</p> <p>ಆಡಳಿತಾರೂಢ ವೈಎಸ್ಆರ್ಸಿಪಿಯಿಂದ ಹೊರಬಂದ ಎಂ.ಶ್ರೀನಿವಾಸುಲು ರೆಡ್ಡಿ ಅವರನ್ನು ಟಿಡಿಪಿ ಒಂಗೋಲ್ನಿಂದ ಕಣಕ್ಕಿಳಿಸಿದೆ. 2019ರಲ್ಲಿ ಇವರು ವೈಎಸ್ಆರ್ಸಿಪಿ ಟಿಕೆಟ್ನಲ್ಲಿ ಅದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.</p> <p>ವಿಜಯನಗರದಿಂದ ಕೆ. ಅಪ್ಪಲನಾಯ್ಡು, ಅನಂತಪುರದಿಂದ ಎ. ಲಕ್ಷ್ಮೀನಾರಾಯಣ ಮತ್ತು ಕಡಪದಿಂದ ಸಿ. ಭೂಪೇಶ್ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. </p> <p>ಈ ನಾಲ್ಕು ಹೆಸರುಗಳ ಘೋಷಣೆಯೊಂದಿಗೆ, ಟಿಡಿಪಿ 17 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಾರ್ವಜನಿಕ ಅಭಿಪ್ರಾಯ ಪಡೆದು ಟಿಡಿಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿತ್ತು . </p> <p>17 ಲೋಕಸಭಾ ಸ್ಥಾನಗಳಲ್ಲದೆ, ರಾಜ್ಯದಲ್ಲಿ ಮೇ 13 ರಂದು ಏಕಕಾಲದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿಗೆ 144 ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದೆ. ಒಪ್ಪಂದದ ಪ್ರಕಾರ, ನಟ ಪವನ್ ಕಲ್ಯಾಣ್ ಅವರ ಜನಸೇನಾ ಎರಡು ಲೋಕಸಭಾ ಕ್ಷೇತ್ರ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ .</p> <p>ಆಂಧ್ರಪ್ರದೇಶವು ಒಟ್ಟು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.</p> .Andhra: ಎನ್ಡಿಎ ಸೀಟು ಹಂಚಿಕೆ; ಬಿಜೆಪಿ 6, ಟಿಡಿಪಿ 17 ಸ್ಥಾನಗಳಲ್ಲಿ ಸ್ಪರ್ಧೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>