<p><strong>ಮಾಲ್ಡಾ (ಪ.ಬಂಗಾಳ):</strong> ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.</p><p>ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. </p><p>ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ದೇಶದ ಸಂಪನ್ಮೂಲಗಳನ್ನು ಬಳಕೆ ಮಾಡಿ ವ್ಯಾಪಕ ಪ್ರಚಾರ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಏಳು ಹಂತಗಳಲ್ಲಿ ಮತದಾನ ಹಮ್ಮಿಕೊಂಡಿದೆ ಎಂದು ಮಮತಾ ದೂರಿದರು. </p><p>ಮಾಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಹಿಂದೆಲ್ಲ ಮೇ ತಿಂಗಳೊಳಗೆ ಚುನಾವಣೆ ಮುಕ್ತಾಯಗೊಳ್ಳುತ್ತಿತ್ತು. ಈ ವರ್ಷ ವಿಶೇಷ ವಿಮಾನಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮತದಾನವನ್ನು ಜೂನ್ 1ರವರೆಗೆ ಮುಂದೂಡಲಾಗಿದೆ. ಪ್ರತಿ ಹಂತದ ಮತದಾನಕ್ಕೂ ಮೊದಲು ಪ್ರಧಾನಿ ಮೋದಿ ಹಾಗೂ ಸಂಪುಟ ದರ್ಜೆಯ ಸಚಿವರು ವಿಶೇಷ ವಿಮಾನಗಳಲ್ಲಿ ಸಂಚರಿಸಿ ಪ್ರಚಾರ ಮಾಡಬಹುದಾಗಿದೆ' ಎಂದು ಅವರು ಆರೋಪಿಸಿದರು. </p><p>ಬಿಸಿಲಿನ ತಾಪದಿಂದ ಜನರು ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. </p>.ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ.LS Polls: ಇಂದು ರಾಜ್ಯಕ್ಕೆ ಪ್ರಧಾನಿ ಆಗಮನ: ಎಲ್ಲಿ? ಯಾವಾಗ ಮೋದಿ ಕಾರ್ಯಕ್ರಮ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲ್ಡಾ (ಪ.ಬಂಗಾಳ):</strong> ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.</p><p>ಲೋಕಸಭೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. </p><p>ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ದೇಶದ ಸಂಪನ್ಮೂಲಗಳನ್ನು ಬಳಕೆ ಮಾಡಿ ವ್ಯಾಪಕ ಪ್ರಚಾರ ಮಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಏಳು ಹಂತಗಳಲ್ಲಿ ಮತದಾನ ಹಮ್ಮಿಕೊಂಡಿದೆ ಎಂದು ಮಮತಾ ದೂರಿದರು. </p><p>ಮಾಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಹಿಂದೆಲ್ಲ ಮೇ ತಿಂಗಳೊಳಗೆ ಚುನಾವಣೆ ಮುಕ್ತಾಯಗೊಳ್ಳುತ್ತಿತ್ತು. ಈ ವರ್ಷ ವಿಶೇಷ ವಿಮಾನಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮತದಾನವನ್ನು ಜೂನ್ 1ರವರೆಗೆ ಮುಂದೂಡಲಾಗಿದೆ. ಪ್ರತಿ ಹಂತದ ಮತದಾನಕ್ಕೂ ಮೊದಲು ಪ್ರಧಾನಿ ಮೋದಿ ಹಾಗೂ ಸಂಪುಟ ದರ್ಜೆಯ ಸಚಿವರು ವಿಶೇಷ ವಿಮಾನಗಳಲ್ಲಿ ಸಂಚರಿಸಿ ಪ್ರಚಾರ ಮಾಡಬಹುದಾಗಿದೆ' ಎಂದು ಅವರು ಆರೋಪಿಸಿದರು. </p><p>ಬಿಸಿಲಿನ ತಾಪದಿಂದ ಜನರು ತೊಂದರೆಗೀಡಾಗಿದ್ದಾರೆ. ಆದರೆ ಬಿಜೆಪಿ ನಾಯಕರು ವಿವಿಐಪಿ ಸೌಲಭ್ಯದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. </p>.ಪ್ರಜಾಪ್ರಭುತ್ವದ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದ ಹೋರಾಟ: ರಾಹುಲ್ ಗಾಂಧಿ.LS Polls: ಇಂದು ರಾಜ್ಯಕ್ಕೆ ಪ್ರಧಾನಿ ಆಗಮನ: ಎಲ್ಲಿ? ಯಾವಾಗ ಮೋದಿ ಕಾರ್ಯಕ್ರಮ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>