<p><strong>ಮಿರ್ಜಾಪುರ (ಉತ್ತರ ಪ್ರದೇಶ):</strong> ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ‘ಕೋಮುವಾದ’ ಮತ್ತು ‘ಜಾತಿವಾದ’ದಿಂದ ಕೂಡಿದ್ದು, ಮೈತ್ರಿಕೂಟದ ನಾಯಕರು ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. </p><p>ಮಿರ್ಜಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಅನುಪ್ರಿಯಾ ಪರ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. </p><p>‘ಸಮಾಜವಾದಿ ಪಕ್ಷ (ಎಸ್ಪಿ) ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ಗೆ ಮೀಸಲಾಗಿದ್ದರೆ, ನಾವು ಹಿಂದುಳಿದ ವರ್ಗಗಳು ಮತ್ತು ಬಡವರ ಹಕ್ಕುಗಳಿಗೆ ಸಮರ್ಪಿತರಾಗಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ. </p><p>ಇಂಡಿಯಾ ಮೈತ್ರಿಕೂಟದ ನಾಯಕರು ಕೋಮುವಾದಿ, ಜಾತಿವಾದಿ ಹಾಗೂ ಪರಿವಾರವಾದಿಗಳಾಗಿದ್ದಾರೆ (ಕುಟುಂಬಗಳ ಹಿಡಿತ). ಅವರು ಅಧಿಕಾರದಲ್ಲಿದ್ದಾಗಲೆಲ್ಲ ಕುಟುಂಬ ರಾಜಕಾರಣದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. </p><p>ಸಮಾಜವಾದಿ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷಿಸುವ ಮೂಲಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.</p><p>ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಿರ್ಜಾಪುರ (ಉತ್ತರ ಪ್ರದೇಶ):</strong> ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ‘ಕೋಮುವಾದ’ ಮತ್ತು ‘ಜಾತಿವಾದ’ದಿಂದ ಕೂಡಿದ್ದು, ಮೈತ್ರಿಕೂಟದ ನಾಯಕರು ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಸಂವಿಧಾನವನ್ನು ತಿದ್ದುಪಡಿ ಮಾಡಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. </p><p>ಮಿರ್ಜಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಅನುಪ್ರಿಯಾ ಪರ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. </p><p>‘ಸಮಾಜವಾದಿ ಪಕ್ಷ (ಎಸ್ಪಿ) ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ಗೆ ಮೀಸಲಾಗಿದ್ದರೆ, ನಾವು ಹಿಂದುಳಿದ ವರ್ಗಗಳು ಮತ್ತು ಬಡವರ ಹಕ್ಕುಗಳಿಗೆ ಸಮರ್ಪಿತರಾಗಿದ್ದೇವೆ’ ಎಂದು ಮೋದಿ ತಿಳಿಸಿದ್ದಾರೆ. </p><p>ಇಂಡಿಯಾ ಮೈತ್ರಿಕೂಟದ ನಾಯಕರು ಕೋಮುವಾದಿ, ಜಾತಿವಾದಿ ಹಾಗೂ ಪರಿವಾರವಾದಿಗಳಾಗಿದ್ದಾರೆ (ಕುಟುಂಬಗಳ ಹಿಡಿತ). ಅವರು ಅಧಿಕಾರದಲ್ಲಿದ್ದಾಗಲೆಲ್ಲ ಕುಟುಂಬ ರಾಜಕಾರಣದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದು ದೇಶದ ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. </p><p>ಸಮಾಜವಾದಿ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷಿಸುವ ಮೂಲಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.</p><p>ಲೋಕಸಭೆ ಚುನಾವಣೆಗೆ ಏಳನೇ ಮತ್ತು ಕೊನೆಯ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>