ಮಥುರಾದಲ್ಲಿ ಯಮುನಾ ನದಿ ಸ್ವಚ್ಛತಾ ಕಾರ್ಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಹೇಮಾ ಮಾಲಿನಿ, 50 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಕೇವಲ 10 ವರ್ಷದಲ್ಲಿ ಮಾಡುವುದು ಅಸಾಧ್ಯ. ಆದರೆ ಯಮುನಾ ನದಿ ಸ್ವಚ್ಛತಾ ಕಾರ್ಯ ಸಂಬಂಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಮಾಲಿನಿ, ಜೀವನದಲ್ಲಿ ಏನನ್ನಾದರೂ ಸಾಧಿಸಿದವರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.