<p><strong>ಪುಣೆ:</strong> ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ-ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಆರೋಪಿಸಿದ್ದಾರೆ. </p><p>ಪುಣೆಯ ಸಾಸ್ವಢ ತೆಹಸಿಲ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಈ ಬಾರಿದ ಸಾರ್ವತ್ರಿ ಚುನಾವಣೆ ಹಿಂದಿಗಿಂತಲೂ ಭಿನ್ನವಾಗಿರಲಿದೆ. ಯಾವ ವಿಧಾನದಿಂದ ದೇಶವು ಮುನ್ನಡೆಯಲಿದೆ ಎಂಬುದನ್ನು ನಿರ್ಧರಿಸಲಿದೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಬಿಜೆಪಿ ಸರ್ವಾಧಿಕಾರದ ಹಾದಿಯಲ್ಲಿ ಹೋಗುತ್ತಿದ್ದು, ಪ್ರಜಾಪ್ರಭುತ್ವದ ನಾಶ ಮಾಡುತ್ತಿದೆ. ಹಾಗಾಗಿ ದೇಶದ ರಕ್ಷಣೆಗಾಗಿ ಬಿಜೆಪಿಯನ್ನು ಸೋಲಿಸಬೇಕಿದೆ' ಎಂದು ಅವರು ಮನವಿ ಮಾಡಿದ್ದಾರೆ. </p><p>'ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಇರಾದೆಯಾಗಿದೆ. ಆದರೆ ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ' ಎಂದು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ-ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಭಾನುವಾರ ಆರೋಪಿಸಿದ್ದಾರೆ. </p><p>ಪುಣೆಯ ಸಾಸ್ವಢ ತೆಹಸಿಲ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಈ ಬಾರಿದ ಸಾರ್ವತ್ರಿ ಚುನಾವಣೆ ಹಿಂದಿಗಿಂತಲೂ ಭಿನ್ನವಾಗಿರಲಿದೆ. ಯಾವ ವಿಧಾನದಿಂದ ದೇಶವು ಮುನ್ನಡೆಯಲಿದೆ ಎಂಬುದನ್ನು ನಿರ್ಧರಿಸಲಿದೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಬಿಜೆಪಿ ಸರ್ವಾಧಿಕಾರದ ಹಾದಿಯಲ್ಲಿ ಹೋಗುತ್ತಿದ್ದು, ಪ್ರಜಾಪ್ರಭುತ್ವದ ನಾಶ ಮಾಡುತ್ತಿದೆ. ಹಾಗಾಗಿ ದೇಶದ ರಕ್ಷಣೆಗಾಗಿ ಬಿಜೆಪಿಯನ್ನು ಸೋಲಿಸಬೇಕಿದೆ' ಎಂದು ಅವರು ಮನವಿ ಮಾಡಿದ್ದಾರೆ. </p><p>'ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಇರಾದೆಯಾಗಿದೆ. ಆದರೆ ದೇಶದ ಸಂವಿಧಾನವನ್ನು ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ' ಎಂದು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>