<p><strong>ಲಖನೌ:</strong> ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 16 ಸ್ಥಾನಗಳಿಗೆ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಭಾನುವಾರ) ಅಧಿಕೃತವಾಗಿ ಪ್ರಕಟಿಸಿದೆ.</p>.<p>ಕೆಲವು ಜಿಲ್ಲೆಗಳಲ್ಲಿ ಪಕ್ಷದ ಉಸ್ತುವಾರಿಗಳು ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದಲ್ಲಿ ಮೊದಲೇ ಘೋಷಿಸಿದ್ದರು.</p><p>ಮಾಯಾವತಿ ನೇತೃತ್ವದ ಪಕ್ಷವು ಶಹರಾನ್ಪುರದಿಂದ ಮಜಿದ್ ಅಲಿ, ಕೈರಾನಾದಿಂದ ಶ್ರೀಪಾಲ್ ಸಿಂಗ್, ಮುಜಾಫರ್ ನಗರದಿಂದ ದಾರಾ ಸಿಂಗ್ ಪ್ರಜಾಪತಿ, ಬಿಜ್ನೋರ್ನಿಂದ ವಿಜಯೇಂದ್ರ ಸಿಂಗ್, ನಗೀನಾದಿಂದ ಸುರೇಂದ್ರ ಪಾಲ್ ಸಿಂಗ್ ಮತ್ತು ಮೊರಾದಾಬಾದ್ನಿಂದ ಮೊಹಮ್ಮದ್ ಇರ್ಫಾನ್ ಸೈಫಿ ಅವರನ್ನು ಕಣಕ್ಕಿಳಿಸಿದೆ.</p><p>ರಾಂಪುರದಿಂದ ಜಿಶಾನ್ ಖಾನ್, ಸಂಭಾಲ್ನಿಂದ ಶೌಲತ್ ಅಲಿ, ಅಮ್ರೋಹಾದಿಂದ ಮೊಜಾಹಿದ್ ಹುಸೇನ್, ಮೀರತ್ನಿಂದ ದೇವವ್ರತ್ ತ್ಯಾಗಿ ಮತ್ತು ಬಾಗ್ಪತ್ನಿಂದ ಪ್ರವೀಣ್ ಬನ್ಸಾಲ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷವು ತಿಳಿಸಿದೆ.</p><p>ಇದರೊಂದಿಗೆ, ಗೌತಮ್ ನಗರದಿಂದ ರಾಜೇಂದ್ರ ಸಿಂಗ್ ಸೋಲಂಕಿ ಅವರು ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಬುಲಂದ್ಶಹರ್ನಿಂದ ಗಿರೀಶ್ ಚಂದ್ರ ಜಾತವ್, ಅಯೋನ್ಲಾದಿಂದ ಅಬಿದ್ ಅಲಿ, ಪಿಲಿಭಿತ್ನಿಂದ ಅನೀಸ್ ಅಹ್ಮದ್ ಖಾನ್ ಮತ್ತು ಶಹಜಹಾನ್ಪುರನಿಂದ ದೊಡರಾಮ್ ವರ್ಮಾ ಸ್ಪರ್ಧಿಸಲಿದ್ದಾರೆ. </p><p>ಏಪ್ರಿಲ್ 19ರಿಂದ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 16 ಸ್ಥಾನಗಳಿಗೆ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಭಾನುವಾರ) ಅಧಿಕೃತವಾಗಿ ಪ್ರಕಟಿಸಿದೆ.</p>.<p>ಕೆಲವು ಜಿಲ್ಲೆಗಳಲ್ಲಿ ಪಕ್ಷದ ಉಸ್ತುವಾರಿಗಳು ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದಲ್ಲಿ ಮೊದಲೇ ಘೋಷಿಸಿದ್ದರು.</p><p>ಮಾಯಾವತಿ ನೇತೃತ್ವದ ಪಕ್ಷವು ಶಹರಾನ್ಪುರದಿಂದ ಮಜಿದ್ ಅಲಿ, ಕೈರಾನಾದಿಂದ ಶ್ರೀಪಾಲ್ ಸಿಂಗ್, ಮುಜಾಫರ್ ನಗರದಿಂದ ದಾರಾ ಸಿಂಗ್ ಪ್ರಜಾಪತಿ, ಬಿಜ್ನೋರ್ನಿಂದ ವಿಜಯೇಂದ್ರ ಸಿಂಗ್, ನಗೀನಾದಿಂದ ಸುರೇಂದ್ರ ಪಾಲ್ ಸಿಂಗ್ ಮತ್ತು ಮೊರಾದಾಬಾದ್ನಿಂದ ಮೊಹಮ್ಮದ್ ಇರ್ಫಾನ್ ಸೈಫಿ ಅವರನ್ನು ಕಣಕ್ಕಿಳಿಸಿದೆ.</p><p>ರಾಂಪುರದಿಂದ ಜಿಶಾನ್ ಖಾನ್, ಸಂಭಾಲ್ನಿಂದ ಶೌಲತ್ ಅಲಿ, ಅಮ್ರೋಹಾದಿಂದ ಮೊಜಾಹಿದ್ ಹುಸೇನ್, ಮೀರತ್ನಿಂದ ದೇವವ್ರತ್ ತ್ಯಾಗಿ ಮತ್ತು ಬಾಗ್ಪತ್ನಿಂದ ಪ್ರವೀಣ್ ಬನ್ಸಾಲ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷವು ತಿಳಿಸಿದೆ.</p><p>ಇದರೊಂದಿಗೆ, ಗೌತಮ್ ನಗರದಿಂದ ರಾಜೇಂದ್ರ ಸಿಂಗ್ ಸೋಲಂಕಿ ಅವರು ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಬುಲಂದ್ಶಹರ್ನಿಂದ ಗಿರೀಶ್ ಚಂದ್ರ ಜಾತವ್, ಅಯೋನ್ಲಾದಿಂದ ಅಬಿದ್ ಅಲಿ, ಪಿಲಿಭಿತ್ನಿಂದ ಅನೀಸ್ ಅಹ್ಮದ್ ಖಾನ್ ಮತ್ತು ಶಹಜಹಾನ್ಪುರನಿಂದ ದೊಡರಾಮ್ ವರ್ಮಾ ಸ್ಪರ್ಧಿಸಲಿದ್ದಾರೆ. </p><p>ಏಪ್ರಿಲ್ 19ರಿಂದ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>