ಚಂಡೀಗಢ: ಲೋಕಸಭೆ ಚುನಾವಣೆಗೆ ಮುನ್ನ ಶಿರೋಮಣಿ ಅಕಾಲಿ ದಳಕ್ಕೆ (ಎಸ್ಎಡಿ) ಹಿನ್ನಡೆ ಉಂಟಾಗಿದ್ದು, ಪಕ್ಷದ ಮಾಜಿ ಶಾಸಕ ಪವನ್ ಕುಮಾರ್ ಟೀನು ಅವರ ಭಾನುವಾರ ಎಎಪಿ ಸೇರ್ಪಡೆಗೊಂಡರು.
ಟೀನು ಅವರು ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಟೀನು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ದಲಿತ ನಾಯಕರೂ ಆಗಿರುವ ಟೀನು, 2012– 2017ರ ಅವಧಿಯಲ್ಲಿ ಜಲಂಧರ್ ಜಿಲ್ಲೆಯ ಆದಂಪುರ ಕ್ಷೇತ್ರದ ಶಾಸಕರಾಗಿದ್ದರು. 2022ರ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಎದುರು ಸೋತಿದ್ದರು. 2014ರ ಲೋಸಕಭಾ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದರು.
ಎಎಪಿಯು ಜಲಂಧರ್ ಕ್ಷೇತ್ರಕ್ಕೆ ರಿಂಕು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಆದರೆ ಅವರು ಪಕ್ಷ ತೊರೆದು ಬಿಜೆಪಿ ಸೇರಿದ್ದರು.