<p><strong>ಇಂಫಾಲ್:</strong> ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಲೋಕಸಭೆ ಚುನಾವಣೆ ಸುಸೂತ್ರವಾಗಿ ಆಯೋಜಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. </p><p>ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾರ್ ಝಾ ಪ್ರಕಾರ, 'ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ. </p><p>ಸ್ಥಳಾಂತರಗೊಂಡಿರುವ ಜನರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಶ್ರಯ ಶಿಬಿರಗಳಲ್ಲಿ ಮತಗಟ್ಟೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. </p><p>ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ ಮಾಡಲು 94 ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ. </p><p>ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. ಚುನಾವಣೆ ಭದ್ರತೆಗಾಗಿ 200ಕ್ಕೂ ಹೆಚ್ಚು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ನಾಗರಿಕರಿಗೆ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸುವ ಕಾರ್ಯಕ್ರಮ ಆರಂಭಗೂಂಡಿದೆ. ಈ ನಡುವೆ ಚುನಾವಣೆ ಬಹಿಷ್ಕರಿಸುವ ಭೀತಿಯೂ ಎದುರಾಗಿದೆ. </p><p>ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ಆರಂಭವಾಗಿದ್ದ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 219 ಮಂದಿ ಮೃತಪಟ್ಟಿದ್ದಾರೆ. ಮನೆಗಳನ್ನು ತೊರೆದಿರುವ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು, ವಿವಿಧ ಜಿಲ್ಲೆಗಳಲ್ಲಿ ತೆರೆಯಲಾಗಿರುವ ಆಶ್ರಯ ಶಿಬಿರಗಳಲ್ಲಿ ನೆಲೆಸಿದ್ದಾರೆ. </p><p>ಲೋಕಸಭೆಯ ಎರಡು ಕ್ಷೇತ್ರಗಳಿರುವ ಮಣಿಪುರದಲ್ಲಿ ಏಪ್ರಿಲ್ 19 ಹಾಗೂ 26ರಂದು ಮತದಾನ ನಡೆಯಲಿದೆ. ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಲೋಕಸಭೆ ಚುನಾವಣೆ ಸುಸೂತ್ರವಾಗಿ ಆಯೋಜಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. </p><p>ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾರ್ ಝಾ ಪ್ರಕಾರ, 'ಸ್ಥಳಾಂತರಗೊಂಡ 24,500ಕ್ಕೂ ಹೆಚ್ಚು ಜನರು ಮತದಾನದ ಹಕ್ಕಿಗೆ ಅರ್ಹರಾಗಿದ್ದಾರೆ. ಅವರಿಗೆ ಆಶ್ರಯ ಶಿಬಿರಗಳಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ. </p><p>ಸ್ಥಳಾಂತರಗೊಂಡಿರುವ ಜನರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಆಶ್ರಯ ಶಿಬಿರಗಳಲ್ಲಿ ಮತಗಟ್ಟೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. </p><p>ಲೋಕಸಭೆ ಚುನಾವಣೆಗಾಗಿ ರಾಜ್ಯದಲ್ಲಿ ಒಟ್ಟು 2,955 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ ಶೇ 50ರಷ್ಟು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸ್ಥಳಾಂತರಗೊಂಡ ಜನರಿಗೆ ಮತದಾನ ಮಾಡಲು 94 ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ. </p><p>ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ. ಚುನಾವಣೆ ಭದ್ರತೆಗಾಗಿ 200ಕ್ಕೂ ಹೆಚ್ಚು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ನಾಗರಿಕರಿಗೆ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸುವ ಕಾರ್ಯಕ್ರಮ ಆರಂಭಗೂಂಡಿದೆ. ಈ ನಡುವೆ ಚುನಾವಣೆ ಬಹಿಷ್ಕರಿಸುವ ಭೀತಿಯೂ ಎದುರಾಗಿದೆ. </p><p>ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ಆರಂಭವಾಗಿದ್ದ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 219 ಮಂದಿ ಮೃತಪಟ್ಟಿದ್ದಾರೆ. ಮನೆಗಳನ್ನು ತೊರೆದಿರುವ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು, ವಿವಿಧ ಜಿಲ್ಲೆಗಳಲ್ಲಿ ತೆರೆಯಲಾಗಿರುವ ಆಶ್ರಯ ಶಿಬಿರಗಳಲ್ಲಿ ನೆಲೆಸಿದ್ದಾರೆ. </p><p>ಲೋಕಸಭೆಯ ಎರಡು ಕ್ಷೇತ್ರಗಳಿರುವ ಮಣಿಪುರದಲ್ಲಿ ಏಪ್ರಿಲ್ 19 ಹಾಗೂ 26ರಂದು ಮತದಾನ ನಡೆಯಲಿದೆ. ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>