<p><strong>ಕಣ್ಣೂರು/ಆಲಪ್ಪುಳ</strong>: ಸಿಪಿಎಂನ ಹಿರಿಯ ಮುಖಂಡ ಇ.ಪಿ. ಜಯರಾಜನ್ ಅವರು ಬಿಜೆಪಿಗೆ ಸೇರಲು ಬಯಸಿದ್ದರು ಎಂಬ ಆರೋಪ ಕೇಳಿ ಬಂದ ಕಾರಣ, ಲೋಕಸಭಾ ಚುನಾವಣೆಯ ಮತದಾನ ದಿನದಂದು ಕೇರಳದ ಆಡಳಿತಾರೂಢ ಪಕ್ಷವು ತೀವ್ರ ಮುಜುಗರಕ್ಕೆ ಒಳಗಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ಜಯರಾಜನ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಪ್ರಯತ್ನ ನಡೆದಿತ್ತು ಎಂಬುದನ್ನು ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರು ಎರಡು ದಿನಗಳ ಹಿಂದೆ ಬಹಿರಂಗಪಡಿಸಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಶಿವ ದೇವರು ಪಾಪಿಯ ಜೊತೆಗೆ ಸೇರಿದರೆ, ಶಿವನೂ ಪಾಪಿಯಾಗುತ್ತಾನೆ’ ಎಂದು ಹೇಳಿದ್ದಾರೆ. ಜಯರಾಜನ್ ಅವರು ಸದ್ಯ ಸಿಪಿಎಂ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟದ ಸಂಚಾಲಕರಾಗಿದ್ದಾರೆ.</p>.<p>ಬಿಜೆಪಿ ಮತ್ತು ಜಯರಾಜನ್ ಅವರ ನಡುವೆ ಟಿ.ಜಿ. ನಂದಕುಮಾರ್ ಅವರು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದರು ಎಂದೂ ಆರೋಪಿಸಲಾಗಿತ್ತು.</p>.<p>‘ನಮ್ಮ ದೇಶದ ಕೆಲವು ಜನರು ಪ್ರತಿದಿನ ಏಳುವಾಗಲೇ, ಯಾರಿಗೆ ಮೋಸ ಮಾಡಲಿ ಎಂದು ಆಲೋಚಿಸುತ್ತಿರುತ್ತಾರೆ’ ಎಂದು ಪಿಣರಾಯಿ ಅವರು, ನಂದಕುಮಾರ್ ಹೆಸರು ಉಲ್ಲೇಖಿಸದೆ ಟೀಕಿಸಿದ್ದಾರೆ.</p>.<p>‘ದಶಕಗಳ ರಾಜಕೀಯ ಪಯಣದಲ್ಲಿ ಜಯರಾಜನ್ ಅವರು ಹಲವಾರು ಅಡತಡೆಗಳನ್ನು ಎದುರಿಸಿದ್ದಾರೆ. ಈಗ ನಡೆಯುತ್ತಿರುವ ದಾಳಿ ಕೇವಲ ಅವರ ವಿರುದ್ಧವಲ್ಲ. ಸಿಪಿಎಂ ಮತ್ತು ಎಲ್ಡಿಎಫ್ ಅನ್ನೂ ಗುರಿಯಾಗಿಸಲಾಗಿದೆ’ ಎಂದಿದ್ದಾರೆ. ‘ಇಂತಹ ಅಪಪ್ರಚಾರಗಳನ್ನು ರಾಜ್ಯದ ಜನರು ನಂಬುವುದಿಲ್ಲ’ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಜಯರಾಜನ್ ಅವರು ಬಿಜೆಪಿ ಮುಖಂಡ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿಯಾಗಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಎಂ.ವಿ. ಗೋವಿಂದನ್, ‘ಜನರು ಯಾರನ್ನಾದರೂ ಭೇಟಿಯಾಗಬಹುದು. ಈ ಕುರಿತು ವಿವಾದ ಮಾಡುತ್ತಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು/ಆಲಪ್ಪುಳ</strong>: ಸಿಪಿಎಂನ ಹಿರಿಯ ಮುಖಂಡ ಇ.ಪಿ. ಜಯರಾಜನ್ ಅವರು ಬಿಜೆಪಿಗೆ ಸೇರಲು ಬಯಸಿದ್ದರು ಎಂಬ ಆರೋಪ ಕೇಳಿ ಬಂದ ಕಾರಣ, ಲೋಕಸಭಾ ಚುನಾವಣೆಯ ಮತದಾನ ದಿನದಂದು ಕೇರಳದ ಆಡಳಿತಾರೂಢ ಪಕ್ಷವು ತೀವ್ರ ಮುಜುಗರಕ್ಕೆ ಒಳಗಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>ಜಯರಾಜನ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಪ್ರಯತ್ನ ನಡೆದಿತ್ತು ಎಂಬುದನ್ನು ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ಅವರು ಎರಡು ದಿನಗಳ ಹಿಂದೆ ಬಹಿರಂಗಪಡಿಸಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಶಿವ ದೇವರು ಪಾಪಿಯ ಜೊತೆಗೆ ಸೇರಿದರೆ, ಶಿವನೂ ಪಾಪಿಯಾಗುತ್ತಾನೆ’ ಎಂದು ಹೇಳಿದ್ದಾರೆ. ಜಯರಾಜನ್ ಅವರು ಸದ್ಯ ಸಿಪಿಎಂ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟದ ಸಂಚಾಲಕರಾಗಿದ್ದಾರೆ.</p>.<p>ಬಿಜೆಪಿ ಮತ್ತು ಜಯರಾಜನ್ ಅವರ ನಡುವೆ ಟಿ.ಜಿ. ನಂದಕುಮಾರ್ ಅವರು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದರು ಎಂದೂ ಆರೋಪಿಸಲಾಗಿತ್ತು.</p>.<p>‘ನಮ್ಮ ದೇಶದ ಕೆಲವು ಜನರು ಪ್ರತಿದಿನ ಏಳುವಾಗಲೇ, ಯಾರಿಗೆ ಮೋಸ ಮಾಡಲಿ ಎಂದು ಆಲೋಚಿಸುತ್ತಿರುತ್ತಾರೆ’ ಎಂದು ಪಿಣರಾಯಿ ಅವರು, ನಂದಕುಮಾರ್ ಹೆಸರು ಉಲ್ಲೇಖಿಸದೆ ಟೀಕಿಸಿದ್ದಾರೆ.</p>.<p>‘ದಶಕಗಳ ರಾಜಕೀಯ ಪಯಣದಲ್ಲಿ ಜಯರಾಜನ್ ಅವರು ಹಲವಾರು ಅಡತಡೆಗಳನ್ನು ಎದುರಿಸಿದ್ದಾರೆ. ಈಗ ನಡೆಯುತ್ತಿರುವ ದಾಳಿ ಕೇವಲ ಅವರ ವಿರುದ್ಧವಲ್ಲ. ಸಿಪಿಎಂ ಮತ್ತು ಎಲ್ಡಿಎಫ್ ಅನ್ನೂ ಗುರಿಯಾಗಿಸಲಾಗಿದೆ’ ಎಂದಿದ್ದಾರೆ. ‘ಇಂತಹ ಅಪಪ್ರಚಾರಗಳನ್ನು ರಾಜ್ಯದ ಜನರು ನಂಬುವುದಿಲ್ಲ’ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಜಯರಾಜನ್ ಅವರು ಬಿಜೆಪಿ ಮುಖಂಡ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿಯಾಗಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಎಂ.ವಿ. ಗೋವಿಂದನ್, ‘ಜನರು ಯಾರನ್ನಾದರೂ ಭೇಟಿಯಾಗಬಹುದು. ಈ ಕುರಿತು ವಿವಾದ ಮಾಡುತ್ತಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>