ಬಾಲಕ ಗುರುವಾರ ರಾತ್ರಿ ಬೊಬ್ಬಿಲಿ ಜಂಕ್ಷನ್ ರಸ್ತೆ ಬಳಿ 8 ಗಂಟೆ ಸುಮಾರಿಗೆ ತಿಂಡಿ ಖರೀದಿಸಲು ಬಂದಿದ್ದ ವೇಳೆ ವಿಧಾನಸಭೆ ಚುನಾವಣೆಗೆ ವೈಎಸ್ಆರ್ಸಿಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಅಭ್ಯರ್ಥಿ ಪ್ರಚಾರದ ವಾಹನದಲ್ಲಿ ಇರಲಿಲ್ಲ. ಪ್ರಚಾರ ಮುಗಿದ ಬಳಿಕ ಚಾಲಕನು ವಾಹನದ ಟೈರ್ಗೆ ಗಾಳಿ ತುಂಬಿಸಲು ವಾಹನವನ್ನು ತೆಗೆದುಕೊಂಡು ಹೋದ ವೇಳೆ ಅಪಘಾತ ಸಂಭವಿಸಿದೆ.